ಕೋಲಾರ: ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ನಗರದ ಸಿಎಂಆರ್ ಟಮೋಟ ಮಂಡಿಯಲ್ಲಿ ಸೋಮವಾರ ಶ್ರೀರಾಮನಿಗೆ ವಿಶೇಷ ಪೂಜೆಯೊಂದಿಗೆ ಮಜ್ಜಿಗೆ, ಪಾನಕ, ಕೊಸಂಬಿ, ಅನ್ನದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ಈಡೀ ದೇಶದ ರಾಮ ಭಕ್ರದಲ್ಲಿ ಸಂಭ್ರಮ ಮಾಡಿದೆ, ಎಲ್ಲೆಡೆ ಅನ್ನದಾಸೋಹ, ವಿಶೇಷ ಪೂಜೆಗಳನ್ನು ನಡೆಯುತ್ತಿವೆ. ಕಳೆದ 500 ವರ್ಷಗಳಿಂದ ಮಾಡಿದ ಹೋರಾಟವು ಇವತ್ತು ಸಾರ್ಥಕವಾಗಿದೆ. ದೇಶದ ಪ್ರಧಾನಿಯೊಂದಿಗೆ ನಾವು ಎಲ್ಲರೂ ಶ್ರೀರಾಮ ಮಂದಿರ ಉದ್ಘಾಟನೆಗೆ ಸಾಕ್ಷಿಯಾಗಿದ್ದು ಹೆಮ್ಮೆಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಯುವ ಮುಖಂಡ ಸಿಎಂಆರ್ ಹರೀಶ್, ಕೋಲಾರ- ಚಿಕ್ಕಬಳ್ಳಾಪುರ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್ ಗಣೇಶ್, ಜೆಡಿಎಸ್ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಬಲಿಜ ಸಂಘದ ಮುಖಂಡ ತೋಟಗಳ ಅಶೋಕ್, ರೋಟರಿ ಸುಧಾಕರ್ ಸೇರಿದಂತೆ ಜೆಡಿಎಸ್ ಮುಖಂಡರು ಕಾರ್ಯಕರ್ತರು, ಸಿಎಂಆರ್ ಮಂಡಿ ಸಿಬ್ಬಂದಿ ವರ್ಗ ಇದ್ದರು
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…