Categories: ಕೋಲಾರ

ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಮಂಡಿಯಲ್ಲಿ ಶ್ರೀರಾಮೋತ್ಸವ

ಕೋಲಾರ: ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ನಗರದ ಸಿಎಂಆರ್ ಟಮೋಟ ಮಂಡಿಯಲ್ಲಿ ಸೋಮವಾರ ಶ್ರೀರಾಮನಿಗೆ ವಿಶೇಷ ಪೂಜೆಯೊಂದಿಗೆ ಮಜ್ಜಿಗೆ, ಪಾನಕ, ಕೊಸಂಬಿ, ಅನ್ನದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ಈಡೀ ದೇಶದ ರಾಮ ಭಕ್ರದಲ್ಲಿ ಸಂಭ್ರಮ ಮಾಡಿದೆ, ಎಲ್ಲೆಡೆ ಅನ್ನದಾಸೋಹ, ವಿಶೇಷ ಪೂಜೆಗಳನ್ನು ನಡೆಯುತ್ತಿವೆ. ಕಳೆದ 500 ವರ್ಷಗಳಿಂದ ಮಾಡಿದ ಹೋರಾಟವು ಇವತ್ತು ಸಾರ್ಥಕವಾಗಿದೆ. ದೇಶದ ಪ್ರಧಾನಿಯೊಂದಿಗೆ ನಾವು ಎಲ್ಲರೂ ಶ್ರೀರಾಮ ಮಂದಿರ ಉದ್ಘಾಟನೆಗೆ ಸಾಕ್ಷಿಯಾಗಿದ್ದು ಹೆಮ್ಮೆಯಾಗಿದೆ ಎಂದು ತಿಳಿಸಿದರು.

ಪ್ರತಿಯೊಬ್ಬರಲ್ಲೂ ರಾಮನ ಸಂಭ್ರಮವು ಮನೆ ಮಾಡಿದೆ, ಈ ಸಂಭ್ರಮವನ್ನು ಕೋಟ್ಯಾಂತರ ಜನರು ಟಿವಿಯ ಮೂಲಕ ವೀಕ್ಷಣೆ ಮಾಡುತ್ತಿದ್ದು, ಸಾವಿರಾರು ಜನರು ಅಯೋಧ್ಯೆಗೆ ಹೋಗಿದ್ದಾರೆ. ನಗರದ ಹಲವೆಡೆಗಳಲ್ಲಿ ಎಲ್ಇಡಿ ಸ್ಕ್ರೀನ್ ಹಾಕಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಮ್ಮ ರಾಮ ನಮ್ಮ ಮನೆಗೆ ಬಂದಿದ್ದಾರೆಂಬ ಭಾವನೆ ಜನರಲ್ಲಿದೆ. ಈ ಮೂಲಕ ಎಲ್ಲರ ಮನೆ ಮನಗಳಲ್ಲಿ ರಾಮ ವಿಜೃಂಭಿಸುತ್ತಿದ್ದಾನೆ. ಈ ಸಾಧನೆಗೆ ಕಾರಣವಾದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಯುವ ಮುಖಂಡ ಸಿಎಂಆರ್ ಹರೀಶ್, ಕೋಲಾರ- ಚಿಕ್ಕಬಳ್ಳಾಪುರ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್ ಗಣೇಶ್, ಜೆಡಿಎಸ್ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಬಲಿಜ ಸಂಘದ ಮುಖಂಡ ತೋಟಗಳ ಅಶೋಕ್, ರೋಟರಿ ಸುಧಾಕರ್ ಸೇರಿದಂತೆ ಜೆಡಿಎಸ್‌ ಮುಖಂಡರು ಕಾರ್ಯಕರ್ತರು, ಸಿಎಂಆರ್ ಮಂಡಿ ಸಿಬ್ಬಂದಿ ವರ್ಗ ಇದ್ದರು

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

1 hour ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

3 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

6 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

21 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago