ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರು ರಾಜ್ಯದ ಮುಖ್ಯಮಂತ್ರಿ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯ ಅಧಿಕಾರಿಗಳನ್ನು ಯಾಮಾರಿಸಿರುವ ಆರೋಪ ಕೇಳಿಬಂದಿದೆ.
ಕಳೆದ ಎರಡು ತಿಂಗಳಿನಿಂದ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಗ್ರಾಮಸ್ಥರು ಚರಂಡಿ, ಕುಡಿಯುವ ನೀರು ಸೇರಿದಂತೆ ಗ್ರಾಮದ ಇನ್ನು ಹಲವಾರು ಸಮಸ್ಯೆಗಳ ಕುರಿತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ್ದರು.
ಕೂಡಲೇ ಎಚ್ಚೆತ್ತ ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಅಧಿಕಾರಿಗಳು ಗ್ರಾಮಕ್ಕೆ ಬಂದು ಸಮಸ್ಯೆಯನ್ನು ನೋಡಿ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಆದರೆ ಪಂಚಾಯ್ತಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡದೆ ಎರಡು ತಿಂಗಳ ಹಿಂದೆಯೆ ನೀರಿನ ಸಮಸ್ಯೆ ಬಗೆಹರಿಸಿದ್ದೇವೆ. ಗ್ರಾಮದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ವರದಿ ನೀಡಿ ಕ್ಲೀನ್ ಚಿಟ್ ನೀಡಿ ಹಾಡೋನಹಳ್ಳಿ ಪಂಚಾಯ್ತಿ ಪಿಡಿಓ ಅಧಿಕಾರಿಗಳನ್ನೇ ಯಾಮರಿಸಿದ್ದಾರೆ ಎಂದು ಗ್ರಾಮಸ್ತರು ಆರೋಪ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…