ಸಿಎಂ ಕಚೇರಿ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ಯಾಮಾರಿಸಿದ ಹಾಡೋನಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ…?

ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರು ರಾಜ್ಯದ ಮುಖ್ಯಮಂತ್ರಿ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯ ಅಧಿಕಾರಿಗಳನ್ನು ಯಾಮಾರಿಸಿರುವ ಆರೋಪ ಕೇಳಿಬಂದಿದೆ.

ಕಳೆದ ಎರಡು ತಿಂಗಳಿನಿಂದ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಗ್ರಾಮಸ್ಥರು ಚರಂಡಿ, ಕುಡಿಯುವ ನೀರು ಸೇರಿದಂತೆ ಗ್ರಾಮದ ಇನ್ನು ಹಲವಾರು ಸಮಸ್ಯೆಗಳ ಕುರಿತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ್ದರು.

ಕೂಡಲೇ ಎಚ್ಚೆತ್ತ ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಅಧಿಕಾರಿಗಳು ಗ್ರಾಮಕ್ಕೆ ಬಂದು ಸಮಸ್ಯೆಯನ್ನು ನೋಡಿ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಆದರೆ ಪಂಚಾಯ್ತಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡದೆ ಎರಡು ತಿಂಗಳ ಹಿಂದೆಯೆ ನೀರಿನ ಸಮಸ್ಯೆ ಬಗೆಹರಿಸಿದ್ದೇವೆ. ಗ್ರಾಮದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ವರದಿ ನೀಡಿ ಕ್ಲೀನ್ ಚಿಟ್ ನೀಡಿ ಹಾಡೋನಹಳ್ಳಿ ಪಂಚಾಯ್ತಿ ಪಿಡಿಓ ಅಧಿಕಾರಿಗಳನ್ನೇ ಯಾಮರಿಸಿದ್ದಾರೆ ಎಂದು ಗ್ರಾಮಸ್ತರು ಆರೋಪ ಮಾಡಿದ್ದಾರೆ.

ಗ್ರಾಮಸ್ಥ ಹರ್ಷ “ಪಬ್ಲಿಕ್ ಮಿರ್ಚಿ” ಜೊತೆ ಮಾತನಾಡಿ, ನಮ್ಮ ಗ್ರಾಮದಲ್ಲಿ ಹಲವಾರು ಸಮಸ್ಯೆಗಳಿವೆ. ಕಳೆದ ಎರಡು ತಿಂಗಳಿನಿಂದ ಗ್ರಾಮದ ಸಮಸ್ಯೆಗಳನ್ನು ಇ-ಮೇಲ್ ಮೂಲಕ ಅಧಿಕಾರಿಗಳ ಗಮನಕ್ಕೆ ತಂದಿದ್ದೆವು. ಆದರೆ, ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸದೇ ಎಂದು ಸುಳ್ಳು ಮಾಹಿತಿ ನೀಡಿ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು …

 

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

13 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

13 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

14 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

15 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

18 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

18 hours ago