ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರು ರಾಜ್ಯದ ಮುಖ್ಯಮಂತ್ರಿ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯ ಅಧಿಕಾರಿಗಳನ್ನು ಯಾಮಾರಿಸಿರುವ ಆರೋಪ ಕೇಳಿಬಂದಿದೆ.
ಕಳೆದ ಎರಡು ತಿಂಗಳಿನಿಂದ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಗ್ರಾಮಸ್ಥರು ಚರಂಡಿ, ಕುಡಿಯುವ ನೀರು ಸೇರಿದಂತೆ ಗ್ರಾಮದ ಇನ್ನು ಹಲವಾರು ಸಮಸ್ಯೆಗಳ ಕುರಿತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ್ದರು.
ಕೂಡಲೇ ಎಚ್ಚೆತ್ತ ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಅಧಿಕಾರಿಗಳು ಗ್ರಾಮಕ್ಕೆ ಬಂದು ಸಮಸ್ಯೆಯನ್ನು ನೋಡಿ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಆದರೆ ಪಂಚಾಯ್ತಿ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡದೆ ಎರಡು ತಿಂಗಳ ಹಿಂದೆಯೆ ನೀರಿನ ಸಮಸ್ಯೆ ಬಗೆಹರಿಸಿದ್ದೇವೆ. ಗ್ರಾಮದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ವರದಿ ನೀಡಿ ಕ್ಲೀನ್ ಚಿಟ್ ನೀಡಿ ಹಾಡೋನಹಳ್ಳಿ ಪಂಚಾಯ್ತಿ ಪಿಡಿಓ ಅಧಿಕಾರಿಗಳನ್ನೇ ಯಾಮರಿಸಿದ್ದಾರೆ ಎಂದು ಗ್ರಾಮಸ್ತರು ಆರೋಪ ಮಾಡಿದ್ದಾರೆ.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…