Categories: ರಾಜ್ಯ

ಸಿಎಂ ಕುರ್ಚಿಯ ಹಗ್ಗಾಜಗ್ಗಾಟಕ್ಕೆ ತೆರೆ: ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ಫಿಕ್ಸ್

ಸಿದ್ದರಾಮಯ್ಯಗೆ ಮುಖ್ಯಮಂತ್ರಿ, ಡಿಕೆಶಿಗೆ ಡಿಸಿಎಂ ಸ್ಥಾನ ಫೈನಲ್ ಮಾಡಿ ಸಿಎಂ ಕುರ್ಚಿಯ ಹಗ್ಗಾಜಗ್ಗಾಟಕ್ಕೆ‌ ತೆರೆ ಎಳೆದ ‘ಕೈ’ ಹೈಕಮಾಂಡ್.

2023ರ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ.13ರಂದು ಹೊರಬಿದ್ದಿತು. ಈ ಫಲಿತಾಂಶದಲ್ಲಿ ಕಾಂಗ್ರೆಸ್ ಹೆಚ್ಚು ಬಹುಮತ ಪಡೆದು ಗೆದ್ದು ಸರ್ಕಾರ ರಚನೆ ಮಾಡಲು ಮುಂದಾಗಿದೆ. ಫಲಿತಾಂಶ ಬಂದು 6 ದಿನಗಳು ಕಳೆದರೂ ಸಿಎಂ ಕುರ್ಚಿಗಾಗಿ ಪೈಪೋಟಿ ಮುಂದುವರೆಯಿತು. ಆದರೆ ಇಂದು ಈ ಹಗ್ಗಾಜಗ್ಗಾಟಕ್ಕೆ ‘ಕೈ’ ಹೈಕಮಾಂಡ್ ತೆರೆ ಎಳೆದಿದ್ದಾರೆ.

ವಿರೋಧ ಪಕ್ಷಗಳು, ಜನರ ಭಾರೀ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಪಕ್ಷದ ನಡವಳಿಕೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಸಿದ್ದರು. ದೆಹಲಿ ಹಾಗೂ ರಾಜ್ಯದಲ್ಲಿ ಹೈಕಮಾಂಡ್ ಹಲವು ಸುತ್ತಿನ ಸಭೆಗಳನ್ನು ನಡೆಸಿ, ಇಬ್ಬರಿಗೂ ಮನವೊಲಿಸಿ ಸಿದ್ದರಾಮಯ್ಯಗೆ ಸಿಎಂ, ಡಿಕೆಶಿಗೆ ಡಿಸಿಎಂ ಸ್ಥಾನ ಕೊಟ್ಟು ಸಮಾಧಾನ ಮಾಡಿದ್ದಾರೆ.

ಆರಂಭದ ಎರಡೂವರೆ ವರ್ಷ ಸಿದ್ದರಾಮಯ್ಯ ಮತ್ತು ಉಳಿದ ಎರಡೂವರೆ ವರ್ಷ ಡಿ.ಕೆ.ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಿ ಎಂದು‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸೂಚಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯನವರು ಮೇ.20ರ ಶನಿವಾರದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೇ.20 ಶನಿವಾರ ಮಧ್ಯಾಹ್ನ 12.30ಕ್ಕೆ ಪದಗ್ರಹಣ ನಡೆಯಲಿದೆ ಅದಕ್ಕೆ ಸಕಲ ಸಿದ್ಧತೆ ಆರಂಭವಾಗಿದೆ.

ನೂತನ ಮುಖ್ಯಮಂತ್ರಿ ಆಯ್ಕೆಯಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

22 minutes ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 hour ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

8 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

8 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

14 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago