ಸಿದ್ದರಾಮಯ್ಯಗೆ ಮುಖ್ಯಮಂತ್ರಿ, ಡಿಕೆಶಿಗೆ ಡಿಸಿಎಂ ಸ್ಥಾನ ಫೈನಲ್ ಮಾಡಿ ಸಿಎಂ ಕುರ್ಚಿಯ ಹಗ್ಗಾಜಗ್ಗಾಟಕ್ಕೆ ತೆರೆ ಎಳೆದ ‘ಕೈ’ ಹೈಕಮಾಂಡ್.
2023ರ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ.13ರಂದು ಹೊರಬಿದ್ದಿತು. ಈ ಫಲಿತಾಂಶದಲ್ಲಿ ಕಾಂಗ್ರೆಸ್ ಹೆಚ್ಚು ಬಹುಮತ ಪಡೆದು ಗೆದ್ದು ಸರ್ಕಾರ ರಚನೆ ಮಾಡಲು ಮುಂದಾಗಿದೆ. ಫಲಿತಾಂಶ ಬಂದು 6 ದಿನಗಳು ಕಳೆದರೂ ಸಿಎಂ ಕುರ್ಚಿಗಾಗಿ ಪೈಪೋಟಿ ಮುಂದುವರೆಯಿತು. ಆದರೆ ಇಂದು ಈ ಹಗ್ಗಾಜಗ್ಗಾಟಕ್ಕೆ ‘ಕೈ’ ಹೈಕಮಾಂಡ್ ತೆರೆ ಎಳೆದಿದ್ದಾರೆ.
ವಿರೋಧ ಪಕ್ಷಗಳು, ಜನರ ಭಾರೀ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಪಕ್ಷದ ನಡವಳಿಕೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಸಿದ್ದರು. ದೆಹಲಿ ಹಾಗೂ ರಾಜ್ಯದಲ್ಲಿ ಹೈಕಮಾಂಡ್ ಹಲವು ಸುತ್ತಿನ ಸಭೆಗಳನ್ನು ನಡೆಸಿ, ಇಬ್ಬರಿಗೂ ಮನವೊಲಿಸಿ ಸಿದ್ದರಾಮಯ್ಯಗೆ ಸಿಎಂ, ಡಿಕೆಶಿಗೆ ಡಿಸಿಎಂ ಸ್ಥಾನ ಕೊಟ್ಟು ಸಮಾಧಾನ ಮಾಡಿದ್ದಾರೆ.
ಆರಂಭದ ಎರಡೂವರೆ ವರ್ಷ ಸಿದ್ದರಾಮಯ್ಯ ಮತ್ತು ಉಳಿದ ಎರಡೂವರೆ ವರ್ಷ ಡಿ.ಕೆ.ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸೂಚಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.
ನೂತನ ಮುಖ್ಯಮಂತ್ರಿ ಆಯ್ಕೆಯಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…