ಸಿದ್ದರಾಮಯ್ಯಗೆ ಮುಖ್ಯಮಂತ್ರಿ, ಡಿಕೆಶಿಗೆ ಡಿಸಿಎಂ ಸ್ಥಾನ ಫೈನಲ್ ಮಾಡಿ ಸಿಎಂ ಕುರ್ಚಿಯ ಹಗ್ಗಾಜಗ್ಗಾಟಕ್ಕೆ ತೆರೆ ಎಳೆದ ‘ಕೈ’ ಹೈಕಮಾಂಡ್.
2023ರ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ.13ರಂದು ಹೊರಬಿದ್ದಿತು. ಈ ಫಲಿತಾಂಶದಲ್ಲಿ ಕಾಂಗ್ರೆಸ್ ಹೆಚ್ಚು ಬಹುಮತ ಪಡೆದು ಗೆದ್ದು ಸರ್ಕಾರ ರಚನೆ ಮಾಡಲು ಮುಂದಾಗಿದೆ. ಫಲಿತಾಂಶ ಬಂದು 6 ದಿನಗಳು ಕಳೆದರೂ ಸಿಎಂ ಕುರ್ಚಿಗಾಗಿ ಪೈಪೋಟಿ ಮುಂದುವರೆಯಿತು. ಆದರೆ ಇಂದು ಈ ಹಗ್ಗಾಜಗ್ಗಾಟಕ್ಕೆ ‘ಕೈ’ ಹೈಕಮಾಂಡ್ ತೆರೆ ಎಳೆದಿದ್ದಾರೆ.
ವಿರೋಧ ಪಕ್ಷಗಳು, ಜನರ ಭಾರೀ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಪಕ್ಷದ ನಡವಳಿಕೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಸಿದ್ದರು. ದೆಹಲಿ ಹಾಗೂ ರಾಜ್ಯದಲ್ಲಿ ಹೈಕಮಾಂಡ್ ಹಲವು ಸುತ್ತಿನ ಸಭೆಗಳನ್ನು ನಡೆಸಿ, ಇಬ್ಬರಿಗೂ ಮನವೊಲಿಸಿ ಸಿದ್ದರಾಮಯ್ಯಗೆ ಸಿಎಂ, ಡಿಕೆಶಿಗೆ ಡಿಸಿಎಂ ಸ್ಥಾನ ಕೊಟ್ಟು ಸಮಾಧಾನ ಮಾಡಿದ್ದಾರೆ.
ಆರಂಭದ ಎರಡೂವರೆ ವರ್ಷ ಸಿದ್ದರಾಮಯ್ಯ ಮತ್ತು ಉಳಿದ ಎರಡೂವರೆ ವರ್ಷ ಡಿ.ಕೆ.ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸೂಚಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.
ನೂತನ ಮುಖ್ಯಮಂತ್ರಿ ಆಯ್ಕೆಯಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…