ಸಿದ್ದರಾಮಯ್ಯಗೆ ಮುಖ್ಯಮಂತ್ರಿ, ಡಿಕೆಶಿಗೆ ಡಿಸಿಎಂ ಸ್ಥಾನ ಫೈನಲ್ ಮಾಡಿ ಸಿಎಂ ಕುರ್ಚಿಯ ಹಗ್ಗಾಜಗ್ಗಾಟಕ್ಕೆ ತೆರೆ ಎಳೆದ ‘ಕೈ’ ಹೈಕಮಾಂಡ್.
2023ರ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ.13ರಂದು ಹೊರಬಿದ್ದಿತು. ಈ ಫಲಿತಾಂಶದಲ್ಲಿ ಕಾಂಗ್ರೆಸ್ ಹೆಚ್ಚು ಬಹುಮತ ಪಡೆದು ಗೆದ್ದು ಸರ್ಕಾರ ರಚನೆ ಮಾಡಲು ಮುಂದಾಗಿದೆ. ಫಲಿತಾಂಶ ಬಂದು 6 ದಿನಗಳು ಕಳೆದರೂ ಸಿಎಂ ಕುರ್ಚಿಗಾಗಿ ಪೈಪೋಟಿ ಮುಂದುವರೆಯಿತು. ಆದರೆ ಇಂದು ಈ ಹಗ್ಗಾಜಗ್ಗಾಟಕ್ಕೆ ‘ಕೈ’ ಹೈಕಮಾಂಡ್ ತೆರೆ ಎಳೆದಿದ್ದಾರೆ.
ವಿರೋಧ ಪಕ್ಷಗಳು, ಜನರ ಭಾರೀ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಪಕ್ಷದ ನಡವಳಿಕೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಸಿದ್ದರು. ದೆಹಲಿ ಹಾಗೂ ರಾಜ್ಯದಲ್ಲಿ ಹೈಕಮಾಂಡ್ ಹಲವು ಸುತ್ತಿನ ಸಭೆಗಳನ್ನು ನಡೆಸಿ, ಇಬ್ಬರಿಗೂ ಮನವೊಲಿಸಿ ಸಿದ್ದರಾಮಯ್ಯಗೆ ಸಿಎಂ, ಡಿಕೆಶಿಗೆ ಡಿಸಿಎಂ ಸ್ಥಾನ ಕೊಟ್ಟು ಸಮಾಧಾನ ಮಾಡಿದ್ದಾರೆ.
ಆರಂಭದ ಎರಡೂವರೆ ವರ್ಷ ಸಿದ್ದರಾಮಯ್ಯ ಮತ್ತು ಉಳಿದ ಎರಡೂವರೆ ವರ್ಷ ಡಿ.ಕೆ.ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸೂಚಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.
ನೂತನ ಮುಖ್ಯಮಂತ್ರಿ ಆಯ್ಕೆಯಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…