ಸಿಎಂ ಕುರ್ಚಿ ಕದನ ವಿಚಾರ ಈ ತಿಂಗಳೊಳಗೆ ಪೈಸ್ಲಾಗುತ್ತೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಎಂ ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸ್ಪರ್ಶ ನೀಡುವ ಲಕ್ಷಣಗಳು ಗೋಚರಿಸುತ್ತಿವೆ. ಹಿರಿಯ ಸಚಿವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಖುರ್ಚಿ ಕದನಕ್ಕೆ ಬ್ರೇಕ್ ಬೀಳುವ ಸೂಚನೆಗಳು ಕಾಣಿಸುತ್ತಿವೆ.

ದೇವನಹಳ್ಳಿ ಪಟ್ಟಣದಲ್ಲಿ ಮಾತನಾಡಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಸಿಎಂ ಖುರ್ಚಿ ಕದನ ವಿಚಾರ ಈ ತಿಂಗಳೊಳಗೆ ಪೈಸ್ಲಾಗುತ್ತೆ ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ.

ಸಿಎಂ ಕುರ್ಚಿ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ, ಇದೇ ವೇಳೆ ಸಂಪುಟ ಪುನರ್‌ರಚನೆ ಕುರಿತಾದ ಚರ್ಚೆಯೂ ಅಂತಿಮ ಹಂತದಲ್ಲಿದ್ದು, ಅದರ ಬಗ್ಗೆಯೂ ಹೈಕಮಾಂಡ್ ಮಟ್ಟದಲ್ಲಿ ನಿರ್ಧಾರವಾಗಲಿದೆ. ಮುಂದಿನ 15 ರಿಂದ 20 ದಿನಗಳೊಳಗೆ ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎಂದು ಹೇಳಿದರು.

ಮುಂದಿನ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಲಿರುವ ಹಿನ್ನೆಲೆ, ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇತ್ತ ತೆರೆಮರೆಯಲ್ಲಿ ಸಿಎಂ ಕುರ್ಚಿ ವಿವಾದಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಕಾಂಗ್ರೆಸ್ ನಾಯಕತ್ವ ತೀವ್ರ ಚಟುವಟಿಕೆ ನಡೆಸುತ್ತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಸಚಿವ ಮುನಿಯಪ್ಪ ಅವರ ಹೇಳಿಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆಯ ಮುನ್ಸೂಚನೆಯೇ ಎಂಬ ಚರ್ಚೆಗೆ ಮತ್ತಷ್ಟು ಬಲ ನೀಡಿದೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

4 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

5 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

18 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

18 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

18 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

19 hours ago