ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಯತೀಂದ್ರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ಗೊಂದಲಕ್ಕೆ ಹೈಕಮಾಂಡೇ ನೇರ ಕಾರಣ ಎಂದು ಆರೋಪಿಸಿದರು. “ಕಪ್ಪಕಾಣಿಕೆಗಾಗಿ ಹೈಕಮಾಂಡ್ ಈ ಎಲ್ಲ ಆಟಗಳನ್ನು ಆಡಿಸುತ್ತಿದೆ. ನಾಕೊಡೆ ನಿ ಬಿಡೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಇದಕ್ಕೆಲ್ಲ ಕಾರಣ ಹೈಕಮಾಂಡ್” ಎಂದು ಕಿಡಿಕಾರಿದರು.
ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಒಪ್ಪಂದ ಆಗಿತ್ತಾ ಇಲ್ಲವಾ ಎಂಬುದರ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. “ಈ ಕಡೆ ಇವರನ್ನು ಛೂ ಬಿಡ್ತಾರೆ, ಆ ಕಡೆ ಅವರನ್ನ ಛೂ ಬಿಡ್ತಾರೆ. ಎರಡೂ ಕಡೆಯಿಂದ ಬಂಡವಾಳ ಮಾಡಿಕೊಳ್ಳಲಾಗುತ್ತಿದೆ” ಎಂದು ಹೇಳಿದರು.
ಚುನಾವಣೆ ನಡೆಸಬೇಕು ಅಲ್ವಾ? ಯಾರು ಹೆಚ್ಚು ಕೊಡ್ತಾರೋ ಅವರು ಸಿಎಂ ಆಗ್ತಾರೆ, ಇವರು ಜ್ಯಾಸ್ತಿ ಕೊಟ್ಟರೆ ಇವರು ಆಗ್ತಾರೆ ಎಂಬಂತೆ ಹೈಕಮಾಂಡ್ ಎತ್ತಿಕಟ್ಟುತ್ತಿದೆ ಎಂದು ಆರೋಪಿಸಿದರು.
“ಇಬ್ಬರು ನಾಯಕರ ಜಗಳದಲ್ಲಿ ಇಡೀ ರಾಜ್ಯ ಹಾಳಾಗ್ತಿದೆ. ಹೋದ್ಯಾ ಪಿಶಾಚಿ ಅಂದ್ರೆ ಬಂದ್ಯಾ ಗಭಾಷಿಯಲ್ಲಿ ಅನ್ನೋ ತರ ಆಗಿದೆ” ಎಂದು ವ್ಯಂಗ್ಯವಾಡಿದರು.
ಮೆಟ್ರೋ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೇಂದ್ರ ಮಾಡಿದೆ ಎಂದು ಆರೋಪ ಮಾಡುತ್ತಾರೆ. ನಮಗೂ ಅದಕ್ಕೂ ಸಂಬಂಧವಿಲ್ಲ. ಒಂದು ಕಮಿಟಿ ರಚನೆ ಆಗಿದೆ. ಕಮಿಟಿ ಮತ್ತು ರಾಜ್ಯ ಸರಕಾರಕ್ಕೆ ಸಂಬಂಧಿಸಿದ ವಿಚಾರ. ಅವರಿಬ್ಬರು ಮಾತನಾಡಿಕೊಂಡು ಮಾಡಬೇಕು. ಕಮಿಟಿ ಅವರು ಮಾಡಿದ್ದಾರೆ ಎಂದು ತಪ್ಪಿಸಿಕೊಳ್ಳಲು ಮುಂದಾಗುತ್ತಾರೆ. ಮೆಟ್ರೋ ಲಾಸ್ ನಲ್ಲಿ ಇಲ್ಲ. ನಿಮ್ ಖಜಾನೆ ಖಾಲಿ ಆಗಿದೆ. ಎಲ್ಲಾ ಕಡೆಯಿಂದಲೂ ಹೇಗಾದ್ರು ಮಾಡಿ ತುಂಬಿಕೊಳ್ಳಬೇಕು. ಕಾಂಗ್ರೆಸ್ ಗೆ ಎಟಿಎಂ ಇರುವುದು ಕರ್ನಾಟಕದಲ್ಲೇ. ಕೇರಳ, ಪಚ್ಚಿಮ ಬಂಗಾಳ, ತಮಿಳುನಾಡಿಗೆ ದುಡ್ಡು ಕೊಡಬೇಕು. ಆದ್ದರಿಂದ ಕಡೆಯಲ್ಲೂ ಕೈ ಆಡಿಸುತ್ತಿದ್ದಾರೆ ಎಂದು ಹೇಳಿದರು..
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…