ಸಿಎಂ ಕುರ್ಚಿ ಕದನ ವಿಚಾರ: ‘ನಾಕೊಡೆ ನಿ ಬಿಡೆ’ ಕಪ್ಪಕಾಣಿಕೆಗಾಗಿ ಹೈಕಮಾಂಡ್ ಆಟ- ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಯತೀಂದ್ರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ಗೊಂದಲಕ್ಕೆ ಹೈಕಮಾಂಡೇ ನೇರ ಕಾರಣ ಎಂದು ಆರೋಪಿಸಿದರು. “ಕಪ್ಪಕಾಣಿಕೆಗಾಗಿ ಹೈಕಮಾಂಡ್ ಈ ಎಲ್ಲ ಆಟಗಳನ್ನು ಆಡಿಸುತ್ತಿದೆ. ನಾಕೊಡೆ ನಿ ಬಿಡೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಇದಕ್ಕೆಲ್ಲ ಕಾರಣ ಹೈಕಮಾಂಡ್” ಎಂದು ಕಿಡಿಕಾರಿದರು.

ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಒಪ್ಪಂದ ಆಗಿತ್ತಾ ಇಲ್ಲವಾ ಎಂಬುದರ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. “ಈ ಕಡೆ ಇವರನ್ನು ಛೂ ಬಿಡ್ತಾರೆ, ಆ ಕಡೆ ಅವರನ್ನ ಛೂ ಬಿಡ್ತಾರೆ. ಎರಡೂ ಕಡೆಯಿಂದ ಬಂಡವಾಳ ಮಾಡಿಕೊಳ್ಳಲಾಗುತ್ತಿದೆ” ಎಂದು ಹೇಳಿದರು.

ಚುನಾವಣೆ ನಡೆಸಬೇಕು ಅಲ್ವಾ? ಯಾರು ಹೆಚ್ಚು ಕೊಡ್ತಾರೋ ಅವರು ಸಿಎಂ ಆಗ್ತಾರೆ, ಇವರು ಜ್ಯಾಸ್ತಿ ಕೊಟ್ಟರೆ ಇವರು ಆಗ್ತಾರೆ ಎಂಬಂತೆ ಹೈಕಮಾಂಡ್ ಎತ್ತಿಕಟ್ಟುತ್ತಿದೆ ಎಂದು ಆರೋಪಿಸಿದರು.

“ಇಬ್ಬರು ನಾಯಕರ ಜಗಳದಲ್ಲಿ ಇಡೀ ರಾಜ್ಯ ಹಾಳಾಗ್ತಿದೆ. ಹೋದ್ಯಾ ಪಿಶಾಚಿ ಅಂದ್ರೆ ಬಂದ್ಯಾ ಗಭಾಷಿಯಲ್ಲಿ ಅನ್ನೋ ತರ ಆಗಿದೆ” ಎಂದು ವ್ಯಂಗ್ಯವಾಡಿದರು.

ಮೆಟ್ರೋ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೇಂದ್ರ ಮಾಡಿದೆ ಎಂದು ಆರೋಪ ಮಾಡುತ್ತಾರೆ. ನಮಗೂ ಅದಕ್ಕೂ ಸಂಬಂಧವಿಲ್ಲ. ಒಂದು ಕಮಿಟಿ ರಚನೆ ಆಗಿದೆ. ಕಮಿಟಿ ಮತ್ತು ರಾಜ್ಯ ಸರಕಾರಕ್ಕೆ ಸಂಬಂಧಿಸಿದ ವಿಚಾರ. ಅವರಿಬ್ಬರು ಮಾತನಾಡಿಕೊಂಡು ಮಾಡಬೇಕು. ಕಮಿಟಿ ಅವರು ಮಾಡಿದ್ದಾರೆ ಎಂದು ತಪ್ಪಿಸಿಕೊಳ್ಳಲು ಮುಂದಾಗುತ್ತಾರೆ. ಮೆಟ್ರೋ ಲಾಸ್ ನಲ್ಲಿ ಇಲ್ಲ. ನಿಮ್ ಖಜಾನೆ ಖಾಲಿ ಆಗಿದೆ. ಎಲ್ಲಾ ಕಡೆಯಿಂದಲೂ ಹೇಗಾದ್ರು ಮಾಡಿ ತುಂಬಿಕೊಳ್ಳಬೇಕು. ಕಾಂಗ್ರೆಸ್ ಗೆ ಎಟಿಎಂ ಇರುವುದು ಕರ್ನಾಟಕದಲ್ಲೇ. ಕೇರಳ, ಪಚ್ಚಿಮ ಬಂಗಾಳ, ತಮಿಳುನಾಡಿಗೆ ದುಡ್ಡು ಕೊಡಬೇಕು. ಆದ್ದರಿಂದ  ಕಡೆಯಲ್ಲೂ ಕೈ ಆಡಿಸುತ್ತಿದ್ದಾರೆ ಎಂದು ಹೇಳಿದರು..

Ramesh Babu

Journalist

Recent Posts

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

2 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

4 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

8 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

11 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

2 days ago