Categories: ಕೋಲಾರ

ಸಿಎಂ ಕುರ್ಚಿ ಖಾಲಿ ಇಲ್ಲ, ಬದಲಾವಣೆ ಪ್ರಶ್ನೆಯ ಮಾತು ಎಲ್ಲಿಂದ ಬರುತ್ತೇ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಸಧ್ಯಕ್ಕೆ ಖಾಲಿ ಇಲ್ಲ ಬದಲಾವಣೆಗೆ ಪ್ರಶ್ನೆ ಎಲ್ಲಿಂದ ಬರುತ್ತೇ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನವರು ಐದು ವರ್ಷಗಳ ಅವಧಿ ಪೂರ್ಣಗೊಳಿಸಲಿದ್ದಾರೆ ಇದರ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಹೇಳಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ಬದಲಾವಣೆ ಬಗ್ಗೆ ಅವರು ಇವರು ಹೇಳುವ ಮಾತುಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ ನಮ್ಮ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಬದಲಾವಣೆ ಬಗ್ಗೆ ಎಲ್ಲೂ ಪ್ರಸ್ತಾಪ ಮಾಡಿಲ್ಲ ಸರಕಾರದ ಮಟ್ಟದಲ್ಲಿ ಏನಾದರೂ ಚರ್ಚೆ ಮಾಡಿದ್ದರಾ ಇಲ್ಲವೇ ಇಲ್ಲ ವಿರೋಧ ಪಕ್ಷಗಳ ಊಹಾಪೋಹಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಆಸೆ ಪಟ್ಟಿದ್ದಾರೆ ಎಂಬುದಕ್ಕೆ ಉತ್ತರಿಸಿ ಮುಂದಕ್ಕೆ ಏನಾದರೂ ಸಿಗಬಹುದು ಅಂತ ಕೆಲವರು ಈಗಿನಿಂದಲೂ ಕಲ್ಲು ಹಾಕಲು ಹೊರಟಿರಬಹುದು ಆಸೆಗಾಗಿ ಮಾತಾಡಿದ್ದಾರೆ ಹಾಗೇನಾದರೂ ಇದ್ದಲ್ಲಿ ನನ್ನನ್ನು ಯಾರಾದರೂ ಕೇಳತ್ತಾ ಇದ್ದರೂ ನಮಗೂ ಬೆಂಬಲ ಕೊಡಿ ಅಂತ ಇದುವರೆಗೂ ಅಂತಹ ಪ್ರಸ್ತಾಪ ನಮ್ಮ ಮುಂದೆ ಇಲ್ಲ ಉತ್ತರ ಕರ್ನಾಟಕಕ್ಕೆ ಬೆಳಗಾವಿ ಭಾಗಕ್ಕೆ ಕೇಳತ್ತಾರೆ ಆದರೆ ಕೋಲಾರಕ್ಕೂ ಕೊಡಲಿ ಬಿಡಿ ಬೆಂಗಳೂರಿಗೆ ಹತ್ತಿರವಾಗುತ್ತದೆ ಮೊದಲ ಸಿಎಂ ಕೋಲಾರದಿಂದ ಆಗಿರೋದು ಕೇಳೋದು ತಪ್ಪಿಲ್ಲ ಕೋಲಾರ ಅಭಿವೃದ್ಧಿಗೆ ಮಂತ್ರಯಾಗಲಿ ಶಾಸಕರಾಗಲಿ ಮಾಡೇ ಮಾಡತ್ತೇವೆ ಜನ ಮಾತಾಡಲಿಕ್ಕೆ ಉತ್ತರ ಕೊಡಲ್ಲ ಮುಂದೆ ಎರಡು ತಿಂಗಳಲ್ಲಿ ನೀವೇ ಹೇಳತ್ತೀರ ಅಭಿವೃದ್ಧಿ ವಿಚಾರವನ್ನು ಎಂದು ಉತ್ತರಿಸಿದರು.

ಮುಡಾ ಹಗರಣದ ಬಗ್ಗೆ ಕಾಂಗ್ರೆಸ್ ಪಕ್ಷವೇ ತನಿಖೆಗೆ ಒತ್ತಾಯಿಸಿದೆ ಮೊದಲು ತನಿಖಾ ಸಂಸ್ಥೆಯ ಮೂಲಕ ತನಿಖೆ ನಡೆಯಲಿ ಅಂತ ಆದರೆ ಯಾರೋ ಒಬ್ಬ ವ್ಯಕ್ತಿ ಅರ್ಜಿ ಕೊಟ್ಟ ಮಾತ್ರಕ್ಕೆ ರಾಜ್ಯಪಾಲರು ನೋಟೀಸ್ ನೀಡಿದ್ದಾರೆ ಅಷ್ಟೇ ಅದಕ್ಕೆ ಎಲ್ಲಾ ಸಿಎಂ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ ಪಕ್ಷದಲ್ಲಿ ಇದರ ಬಗ್ಗೆ ತೀರ್ಮಾನ ಇಲ್ಲ ಅಂತಹ ಸಂದರ್ಭ ಬಂದರೆ ಯಾರಿಗೆ ಕೊಡಬೇಕು ಅಂತ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು ನಾನು ಅಂತೂ ಆಕಾಂಕ್ಷಿಯಲ್ಲ ಎಂದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ 2027 ಕ್ಕೆ ಎತ್ತಿನ ಹೊಳೆ ಯೋಜನೆಯಿಂದ ನೀರು ಬರಲಿದೆ ಈಗಾಗಲೇ ಯೋಜನೆಯ ಪ್ರಾರಂಭವಾಗಿ ನೀರು ಹರಿಸಲಾಗುತ್ತಾ ಇದ್ದು ನಮಗೆ 24 ಟಿಎಂಸಿ ನೀರು ಬರಲಿದೆ ಅದರಲ್ಲಿ 9 ಟಿಎಂಸಿ ನೀರು ಕೆರೆಗಳಿಗೆ ತುಂಬಿಸಲಾಗುತ್ತದೆ ಅಲ್ಲಿ ತನಕ ಬೇಸರ ಇದ್ದೇ ಇರುತ್ತದೆ ಅರಣ್ಯ ಇಲಾಖೆಯು ಪರಿಸರ ನಾಶದ ಬಗ್ಗೆ ದೂರಗಳು ಇವೆ ಇದಕ್ಕೆ ಸಿಎಂ ನೇತೃತ್ವದಲ್ಲಿ ಸಭೆ ಮಾಡಲಾಗಿದೆ ಮುಂದೆ ಎಲ್ಲವೂ ಸರಿ ಹೋಗುತ್ತದೆ ಎಂದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

7 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

7 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

8 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

9 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

11 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

18 hours ago