Categories: ಕೋಲಾರ

ಸಿಎಂ ಕುರ್ಚಿ ಖಾಲಿ ಇಲ್ಲ, ಬದಲಾವಣೆ ಪ್ರಶ್ನೆಯ ಮಾತು ಎಲ್ಲಿಂದ ಬರುತ್ತೇ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಸಧ್ಯಕ್ಕೆ ಖಾಲಿ ಇಲ್ಲ ಬದಲಾವಣೆಗೆ ಪ್ರಶ್ನೆ ಎಲ್ಲಿಂದ ಬರುತ್ತೇ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನವರು ಐದು ವರ್ಷಗಳ ಅವಧಿ ಪೂರ್ಣಗೊಳಿಸಲಿದ್ದಾರೆ ಇದರ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಹೇಳಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ಬದಲಾವಣೆ ಬಗ್ಗೆ ಅವರು ಇವರು ಹೇಳುವ ಮಾತುಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ ನಮ್ಮ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಬದಲಾವಣೆ ಬಗ್ಗೆ ಎಲ್ಲೂ ಪ್ರಸ್ತಾಪ ಮಾಡಿಲ್ಲ ಸರಕಾರದ ಮಟ್ಟದಲ್ಲಿ ಏನಾದರೂ ಚರ್ಚೆ ಮಾಡಿದ್ದರಾ ಇಲ್ಲವೇ ಇಲ್ಲ ವಿರೋಧ ಪಕ್ಷಗಳ ಊಹಾಪೋಹಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಆಸೆ ಪಟ್ಟಿದ್ದಾರೆ ಎಂಬುದಕ್ಕೆ ಉತ್ತರಿಸಿ ಮುಂದಕ್ಕೆ ಏನಾದರೂ ಸಿಗಬಹುದು ಅಂತ ಕೆಲವರು ಈಗಿನಿಂದಲೂ ಕಲ್ಲು ಹಾಕಲು ಹೊರಟಿರಬಹುದು ಆಸೆಗಾಗಿ ಮಾತಾಡಿದ್ದಾರೆ ಹಾಗೇನಾದರೂ ಇದ್ದಲ್ಲಿ ನನ್ನನ್ನು ಯಾರಾದರೂ ಕೇಳತ್ತಾ ಇದ್ದರೂ ನಮಗೂ ಬೆಂಬಲ ಕೊಡಿ ಅಂತ ಇದುವರೆಗೂ ಅಂತಹ ಪ್ರಸ್ತಾಪ ನಮ್ಮ ಮುಂದೆ ಇಲ್ಲ ಉತ್ತರ ಕರ್ನಾಟಕಕ್ಕೆ ಬೆಳಗಾವಿ ಭಾಗಕ್ಕೆ ಕೇಳತ್ತಾರೆ ಆದರೆ ಕೋಲಾರಕ್ಕೂ ಕೊಡಲಿ ಬಿಡಿ ಬೆಂಗಳೂರಿಗೆ ಹತ್ತಿರವಾಗುತ್ತದೆ ಮೊದಲ ಸಿಎಂ ಕೋಲಾರದಿಂದ ಆಗಿರೋದು ಕೇಳೋದು ತಪ್ಪಿಲ್ಲ ಕೋಲಾರ ಅಭಿವೃದ್ಧಿಗೆ ಮಂತ್ರಯಾಗಲಿ ಶಾಸಕರಾಗಲಿ ಮಾಡೇ ಮಾಡತ್ತೇವೆ ಜನ ಮಾತಾಡಲಿಕ್ಕೆ ಉತ್ತರ ಕೊಡಲ್ಲ ಮುಂದೆ ಎರಡು ತಿಂಗಳಲ್ಲಿ ನೀವೇ ಹೇಳತ್ತೀರ ಅಭಿವೃದ್ಧಿ ವಿಚಾರವನ್ನು ಎಂದು ಉತ್ತರಿಸಿದರು.

ಮುಡಾ ಹಗರಣದ ಬಗ್ಗೆ ಕಾಂಗ್ರೆಸ್ ಪಕ್ಷವೇ ತನಿಖೆಗೆ ಒತ್ತಾಯಿಸಿದೆ ಮೊದಲು ತನಿಖಾ ಸಂಸ್ಥೆಯ ಮೂಲಕ ತನಿಖೆ ನಡೆಯಲಿ ಅಂತ ಆದರೆ ಯಾರೋ ಒಬ್ಬ ವ್ಯಕ್ತಿ ಅರ್ಜಿ ಕೊಟ್ಟ ಮಾತ್ರಕ್ಕೆ ರಾಜ್ಯಪಾಲರು ನೋಟೀಸ್ ನೀಡಿದ್ದಾರೆ ಅಷ್ಟೇ ಅದಕ್ಕೆ ಎಲ್ಲಾ ಸಿಎಂ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ ಪಕ್ಷದಲ್ಲಿ ಇದರ ಬಗ್ಗೆ ತೀರ್ಮಾನ ಇಲ್ಲ ಅಂತಹ ಸಂದರ್ಭ ಬಂದರೆ ಯಾರಿಗೆ ಕೊಡಬೇಕು ಅಂತ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು ನಾನು ಅಂತೂ ಆಕಾಂಕ್ಷಿಯಲ್ಲ ಎಂದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ 2027 ಕ್ಕೆ ಎತ್ತಿನ ಹೊಳೆ ಯೋಜನೆಯಿಂದ ನೀರು ಬರಲಿದೆ ಈಗಾಗಲೇ ಯೋಜನೆಯ ಪ್ರಾರಂಭವಾಗಿ ನೀರು ಹರಿಸಲಾಗುತ್ತಾ ಇದ್ದು ನಮಗೆ 24 ಟಿಎಂಸಿ ನೀರು ಬರಲಿದೆ ಅದರಲ್ಲಿ 9 ಟಿಎಂಸಿ ನೀರು ಕೆರೆಗಳಿಗೆ ತುಂಬಿಸಲಾಗುತ್ತದೆ ಅಲ್ಲಿ ತನಕ ಬೇಸರ ಇದ್ದೇ ಇರುತ್ತದೆ ಅರಣ್ಯ ಇಲಾಖೆಯು ಪರಿಸರ ನಾಶದ ಬಗ್ಗೆ ದೂರಗಳು ಇವೆ ಇದಕ್ಕೆ ಸಿಎಂ ನೇತೃತ್ವದಲ್ಲಿ ಸಭೆ ಮಾಡಲಾಗಿದೆ ಮುಂದೆ ಎಲ್ಲವೂ ಸರಿ ಹೋಗುತ್ತದೆ ಎಂದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

2 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

3 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

16 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

16 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

16 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

17 hours ago