Categories: ಕೋಲಾರ

ಸಿಎಂ ಕುರ್ಚಿ ಖಾಲಿ ಇಲ್ಲ, ಬದಲಾವಣೆ ಪ್ರಶ್ನೆಯ ಮಾತು ಎಲ್ಲಿಂದ ಬರುತ್ತೇ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಸಧ್ಯಕ್ಕೆ ಖಾಲಿ ಇಲ್ಲ ಬದಲಾವಣೆಗೆ ಪ್ರಶ್ನೆ ಎಲ್ಲಿಂದ ಬರುತ್ತೇ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನವರು ಐದು ವರ್ಷಗಳ ಅವಧಿ ಪೂರ್ಣಗೊಳಿಸಲಿದ್ದಾರೆ ಇದರ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಹೇಳಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ಬದಲಾವಣೆ ಬಗ್ಗೆ ಅವರು ಇವರು ಹೇಳುವ ಮಾತುಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ ನಮ್ಮ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಬದಲಾವಣೆ ಬಗ್ಗೆ ಎಲ್ಲೂ ಪ್ರಸ್ತಾಪ ಮಾಡಿಲ್ಲ ಸರಕಾರದ ಮಟ್ಟದಲ್ಲಿ ಏನಾದರೂ ಚರ್ಚೆ ಮಾಡಿದ್ದರಾ ಇಲ್ಲವೇ ಇಲ್ಲ ವಿರೋಧ ಪಕ್ಷಗಳ ಊಹಾಪೋಹಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಆಸೆ ಪಟ್ಟಿದ್ದಾರೆ ಎಂಬುದಕ್ಕೆ ಉತ್ತರಿಸಿ ಮುಂದಕ್ಕೆ ಏನಾದರೂ ಸಿಗಬಹುದು ಅಂತ ಕೆಲವರು ಈಗಿನಿಂದಲೂ ಕಲ್ಲು ಹಾಕಲು ಹೊರಟಿರಬಹುದು ಆಸೆಗಾಗಿ ಮಾತಾಡಿದ್ದಾರೆ ಹಾಗೇನಾದರೂ ಇದ್ದಲ್ಲಿ ನನ್ನನ್ನು ಯಾರಾದರೂ ಕೇಳತ್ತಾ ಇದ್ದರೂ ನಮಗೂ ಬೆಂಬಲ ಕೊಡಿ ಅಂತ ಇದುವರೆಗೂ ಅಂತಹ ಪ್ರಸ್ತಾಪ ನಮ್ಮ ಮುಂದೆ ಇಲ್ಲ ಉತ್ತರ ಕರ್ನಾಟಕಕ್ಕೆ ಬೆಳಗಾವಿ ಭಾಗಕ್ಕೆ ಕೇಳತ್ತಾರೆ ಆದರೆ ಕೋಲಾರಕ್ಕೂ ಕೊಡಲಿ ಬಿಡಿ ಬೆಂಗಳೂರಿಗೆ ಹತ್ತಿರವಾಗುತ್ತದೆ ಮೊದಲ ಸಿಎಂ ಕೋಲಾರದಿಂದ ಆಗಿರೋದು ಕೇಳೋದು ತಪ್ಪಿಲ್ಲ ಕೋಲಾರ ಅಭಿವೃದ್ಧಿಗೆ ಮಂತ್ರಯಾಗಲಿ ಶಾಸಕರಾಗಲಿ ಮಾಡೇ ಮಾಡತ್ತೇವೆ ಜನ ಮಾತಾಡಲಿಕ್ಕೆ ಉತ್ತರ ಕೊಡಲ್ಲ ಮುಂದೆ ಎರಡು ತಿಂಗಳಲ್ಲಿ ನೀವೇ ಹೇಳತ್ತೀರ ಅಭಿವೃದ್ಧಿ ವಿಚಾರವನ್ನು ಎಂದು ಉತ್ತರಿಸಿದರು.

ಮುಡಾ ಹಗರಣದ ಬಗ್ಗೆ ಕಾಂಗ್ರೆಸ್ ಪಕ್ಷವೇ ತನಿಖೆಗೆ ಒತ್ತಾಯಿಸಿದೆ ಮೊದಲು ತನಿಖಾ ಸಂಸ್ಥೆಯ ಮೂಲಕ ತನಿಖೆ ನಡೆಯಲಿ ಅಂತ ಆದರೆ ಯಾರೋ ಒಬ್ಬ ವ್ಯಕ್ತಿ ಅರ್ಜಿ ಕೊಟ್ಟ ಮಾತ್ರಕ್ಕೆ ರಾಜ್ಯಪಾಲರು ನೋಟೀಸ್ ನೀಡಿದ್ದಾರೆ ಅಷ್ಟೇ ಅದಕ್ಕೆ ಎಲ್ಲಾ ಸಿಎಂ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ ಪಕ್ಷದಲ್ಲಿ ಇದರ ಬಗ್ಗೆ ತೀರ್ಮಾನ ಇಲ್ಲ ಅಂತಹ ಸಂದರ್ಭ ಬಂದರೆ ಯಾರಿಗೆ ಕೊಡಬೇಕು ಅಂತ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು ನಾನು ಅಂತೂ ಆಕಾಂಕ್ಷಿಯಲ್ಲ ಎಂದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ 2027 ಕ್ಕೆ ಎತ್ತಿನ ಹೊಳೆ ಯೋಜನೆಯಿಂದ ನೀರು ಬರಲಿದೆ ಈಗಾಗಲೇ ಯೋಜನೆಯ ಪ್ರಾರಂಭವಾಗಿ ನೀರು ಹರಿಸಲಾಗುತ್ತಾ ಇದ್ದು ನಮಗೆ 24 ಟಿಎಂಸಿ ನೀರು ಬರಲಿದೆ ಅದರಲ್ಲಿ 9 ಟಿಎಂಸಿ ನೀರು ಕೆರೆಗಳಿಗೆ ತುಂಬಿಸಲಾಗುತ್ತದೆ ಅಲ್ಲಿ ತನಕ ಬೇಸರ ಇದ್ದೇ ಇರುತ್ತದೆ ಅರಣ್ಯ ಇಲಾಖೆಯು ಪರಿಸರ ನಾಶದ ಬಗ್ಗೆ ದೂರಗಳು ಇವೆ ಇದಕ್ಕೆ ಸಿಎಂ ನೇತೃತ್ವದಲ್ಲಿ ಸಭೆ ಮಾಡಲಾಗಿದೆ ಮುಂದೆ ಎಲ್ಲವೂ ಸರಿ ಹೋಗುತ್ತದೆ ಎಂದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

21 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago