ಸಿಎಂ, ಡಿಸಿಎಂ ವಿರುದ್ಧ ಅವಹೇಳನ; ಕಾಂಗ್ರೆಸ್ ನಿಂದ ಎಸ್ಪಿಗೆ ದೂರು

ಕೋಲಾರ: ಸಿಎಂ, ಡಿಸಿಎಂ ಸೇರಿದಂತೆ ಕೆಲ ಸಚಿವರನ್ನು ಅಸಭ್ಯ ಪದಗಳ ಮೂಲಕ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವ ಚಿಕ್ಕಬಳ್ಳಾಪುರ ಮೂಲದ ಮೋಹಿತ್ ನರಸಿಂಹಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಸ್ಪಿ ಬಿ ನಿಖಿಲ್ ಅವರಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನಗಳಿಂದ ವಿನಾಕಾರಣ ಸಿಎಂ.ಡಿಸಿಎಂ ದಲಿತ ಸಚಿವರು ಸೇರಿದಂತೆ ಪಕ್ಷದ ನಾಯಕರು ಮುಖಂಡರ ವಿರುದ್ದ ಅಸಭ್ಯವಾಗಿ ವರ್ತಿಸುವವರ ಸಂಖ್ಯೆ ಜಾಸ್ತಿಯಾಗಿದೆ ಇತ್ತೀಚೆಗೆ ಮೋಹಿತ್ ನರಸಿಂಹಮೂರ್ತಿಯ ಉದ್ದಟನವು ಜಾಸ್ತಿಯಾಗಿದ್ದು ಕೂಡಲೇ ಕ್ರಮ ವಹಿಸುವಂತೆ ಮನವಿ ಮಾಡಿದರು.

ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯ ವಿರುದ್ದವೇ ಹೀನಾಯವಾಗಿ ಏಕವಚನದಲ್ಲಿ ಸಂಭೋದಿಸಿ ಬೈಯ್ಯುಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನು ಹರಿದು ಬಿಟ್ಟು ತನ್ನ ನೀಚ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾನೆ ಸಮಾಜದಲ್ಲಿ ಈ ಪ್ರಕರಣದಿಂದ ಶಾಂತಿ ಭಂಗವಾಗುವ ಸಾಧ್ಯತೆಗಳಿದ್ದು ಕಾಂಗ್ರೆಸ್ ಪಕ್ಷದಿಂದ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆಯುವುದಕ್ಕೂ ಮೊದಲೇ ಈತನ ಮೇಲೆ ಸೂಕ್ತ ಕ್ರಮಕೈಗೊಂಡು ಬಂಧಿಸಿ ಶಿಕ್ಷೆಗೆ ಒಳಪಡಿಸಿ ಗಡಿಪಾರು ಮಾಡಬೇಕು. ಇನ್ನು ಮುಂದೆ ಇಂತಹ ಕಿಡಿಗೇಡಿಗಳು ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳಲು ಅವಕಾಶ ಮಾಡಿಕೊಡಬಾರದು ಈ ದಿಕ್ಕಿನಲ್ಲಿ ತಾವುಗಳು ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಎಸ್ಪಿ ಬಿ ನಿಖಿಲ್, ಈ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ಮಾಡಿ ಸಂಬಂಧಿಸಿದ ಜಿಲ್ಲೆಯವರ ಗಮನಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್, ಪದವೀಧರ ಘಟಕದ ಅಧ್ಯಕ್ಷ ಸುಧೀರ್, ಕಾರ್ಮಿಕ ಘಟಕದ ಹೊನ್ನೇನಹಳ್ಳಿ ಯಲ್ಲಪ್ಪ, ಒಬಿಸಿ ಘಟಕದ ಮಂಜುನಾಥ್, ಮುಖಂಡರಾದ ವೆಂಕಟಪತಿಯಪ್ಪ, ನಾಗರಾಜಗೌಡ, ಪರ್ವೇಜ್, ರಾಮಯ್ಯ, ಹರೀಷ್, ಎನ್.ಟಿ.ಆರ್ ಮಂಜುನಾಥ್ ಮುಂತಾದವರು ಇದ್ದರು.

Ramesh Babu

Journalist

Recent Posts

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

3 hours ago

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

8 hours ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

8 hours ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

18 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

19 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

19 hours ago