ಸಿಎಂ, ಡಿಸಿಎಂ ವಿರುದ್ಧ ಅವಹೇಳನ; ಕಾಂಗ್ರೆಸ್ ನಿಂದ ಎಸ್ಪಿಗೆ ದೂರು

ಕೋಲಾರ: ಸಿಎಂ, ಡಿಸಿಎಂ ಸೇರಿದಂತೆ ಕೆಲ ಸಚಿವರನ್ನು ಅಸಭ್ಯ ಪದಗಳ ಮೂಲಕ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವ ಚಿಕ್ಕಬಳ್ಳಾಪುರ ಮೂಲದ ಮೋಹಿತ್ ನರಸಿಂಹಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಸ್ಪಿ ಬಿ ನಿಖಿಲ್ ಅವರಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನಗಳಿಂದ ವಿನಾಕಾರಣ ಸಿಎಂ.ಡಿಸಿಎಂ ದಲಿತ ಸಚಿವರು ಸೇರಿದಂತೆ ಪಕ್ಷದ ನಾಯಕರು ಮುಖಂಡರ ವಿರುದ್ದ ಅಸಭ್ಯವಾಗಿ ವರ್ತಿಸುವವರ ಸಂಖ್ಯೆ ಜಾಸ್ತಿಯಾಗಿದೆ ಇತ್ತೀಚೆಗೆ ಮೋಹಿತ್ ನರಸಿಂಹಮೂರ್ತಿಯ ಉದ್ದಟನವು ಜಾಸ್ತಿಯಾಗಿದ್ದು ಕೂಡಲೇ ಕ್ರಮ ವಹಿಸುವಂತೆ ಮನವಿ ಮಾಡಿದರು.

ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯ ವಿರುದ್ದವೇ ಹೀನಾಯವಾಗಿ ಏಕವಚನದಲ್ಲಿ ಸಂಭೋದಿಸಿ ಬೈಯ್ಯುಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನು ಹರಿದು ಬಿಟ್ಟು ತನ್ನ ನೀಚ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾನೆ ಸಮಾಜದಲ್ಲಿ ಈ ಪ್ರಕರಣದಿಂದ ಶಾಂತಿ ಭಂಗವಾಗುವ ಸಾಧ್ಯತೆಗಳಿದ್ದು ಕಾಂಗ್ರೆಸ್ ಪಕ್ಷದಿಂದ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆಯುವುದಕ್ಕೂ ಮೊದಲೇ ಈತನ ಮೇಲೆ ಸೂಕ್ತ ಕ್ರಮಕೈಗೊಂಡು ಬಂಧಿಸಿ ಶಿಕ್ಷೆಗೆ ಒಳಪಡಿಸಿ ಗಡಿಪಾರು ಮಾಡಬೇಕು. ಇನ್ನು ಮುಂದೆ ಇಂತಹ ಕಿಡಿಗೇಡಿಗಳು ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳಲು ಅವಕಾಶ ಮಾಡಿಕೊಡಬಾರದು ಈ ದಿಕ್ಕಿನಲ್ಲಿ ತಾವುಗಳು ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಎಸ್ಪಿ ಬಿ ನಿಖಿಲ್, ಈ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ಮಾಡಿ ಸಂಬಂಧಿಸಿದ ಜಿಲ್ಲೆಯವರ ಗಮನಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್, ಪದವೀಧರ ಘಟಕದ ಅಧ್ಯಕ್ಷ ಸುಧೀರ್, ಕಾರ್ಮಿಕ ಘಟಕದ ಹೊನ್ನೇನಹಳ್ಳಿ ಯಲ್ಲಪ್ಪ, ಒಬಿಸಿ ಘಟಕದ ಮಂಜುನಾಥ್, ಮುಖಂಡರಾದ ವೆಂಕಟಪತಿಯಪ್ಪ, ನಾಗರಾಜಗೌಡ, ಪರ್ವೇಜ್, ರಾಮಯ್ಯ, ಹರೀಷ್, ಎನ್.ಟಿ.ಆರ್ ಮಂಜುನಾಥ್ ಮುಂತಾದವರು ಇದ್ದರು.

Ramesh Babu

Journalist

Recent Posts

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

17 minutes ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

2 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

10 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

19 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

20 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

22 hours ago