ಕೋಲಾರ: ಸಿಎಂ, ಡಿಸಿಎಂ ಸೇರಿದಂತೆ ಕೆಲ ಸಚಿವರನ್ನು ಅಸಭ್ಯ ಪದಗಳ ಮೂಲಕ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವ ಚಿಕ್ಕಬಳ್ಳಾಪುರ ಮೂಲದ ಮೋಹಿತ್ ನರಸಿಂಹಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಸ್ಪಿ ಬಿ ನಿಖಿಲ್ ಅವರಿಗೆ ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನಗಳಿಂದ ವಿನಾಕಾರಣ ಸಿಎಂ.ಡಿಸಿಎಂ ದಲಿತ ಸಚಿವರು ಸೇರಿದಂತೆ ಪಕ್ಷದ ನಾಯಕರು ಮುಖಂಡರ ವಿರುದ್ದ ಅಸಭ್ಯವಾಗಿ ವರ್ತಿಸುವವರ ಸಂಖ್ಯೆ ಜಾಸ್ತಿಯಾಗಿದೆ ಇತ್ತೀಚೆಗೆ ಮೋಹಿತ್ ನರಸಿಂಹಮೂರ್ತಿಯ ಉದ್ದಟನವು ಜಾಸ್ತಿಯಾಗಿದ್ದು ಕೂಡಲೇ ಕ್ರಮ ವಹಿಸುವಂತೆ ಮನವಿ ಮಾಡಿದರು.
ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯ ವಿರುದ್ದವೇ ಹೀನಾಯವಾಗಿ ಏಕವಚನದಲ್ಲಿ ಸಂಭೋದಿಸಿ ಬೈಯ್ಯುಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನು ಹರಿದು ಬಿಟ್ಟು ತನ್ನ ನೀಚ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾನೆ ಸಮಾಜದಲ್ಲಿ ಈ ಪ್ರಕರಣದಿಂದ ಶಾಂತಿ ಭಂಗವಾಗುವ ಸಾಧ್ಯತೆಗಳಿದ್ದು ಕಾಂಗ್ರೆಸ್ ಪಕ್ಷದಿಂದ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆಯುವುದಕ್ಕೂ ಮೊದಲೇ ಈತನ ಮೇಲೆ ಸೂಕ್ತ ಕ್ರಮಕೈಗೊಂಡು ಬಂಧಿಸಿ ಶಿಕ್ಷೆಗೆ ಒಳಪಡಿಸಿ ಗಡಿಪಾರು ಮಾಡಬೇಕು. ಇನ್ನು ಮುಂದೆ ಇಂತಹ ಕಿಡಿಗೇಡಿಗಳು ಸಾಮಾಜಿಕ ಜಾಲತಾಣವನ್ನು ದುರುಪಯೋಗ ಪಡಿಸಿಕೊಳ್ಳಲು ಅವಕಾಶ ಮಾಡಿಕೊಡಬಾರದು ಈ ದಿಕ್ಕಿನಲ್ಲಿ ತಾವುಗಳು ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಎಸ್ಪಿ ಬಿ ನಿಖಿಲ್, ಈ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ಮಾಡಿ ಸಂಬಂಧಿಸಿದ ಜಿಲ್ಲೆಯವರ ಗಮನಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್, ಪದವೀಧರ ಘಟಕದ ಅಧ್ಯಕ್ಷ ಸುಧೀರ್, ಕಾರ್ಮಿಕ ಘಟಕದ ಹೊನ್ನೇನಹಳ್ಳಿ ಯಲ್ಲಪ್ಪ, ಒಬಿಸಿ ಘಟಕದ ಮಂಜುನಾಥ್, ಮುಖಂಡರಾದ ವೆಂಕಟಪತಿಯಪ್ಪ, ನಾಗರಾಜಗೌಡ, ಪರ್ವೇಜ್, ರಾಮಯ್ಯ, ಹರೀಷ್, ಎನ್.ಟಿ.ಆರ್ ಮಂಜುನಾಥ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…
ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ್ಯಾಂಕ್ ಪಡೆದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…
ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…
ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…