ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ ಹಂಚಿಕೆ ಮಾಡಿದ್ದಾರೆ.
1. ಡಿ.ಕೆ ಶಿವಕುಮಾರ್ – ಮುಖ್ಯಮಂತ್ರಿ – ಹಣಕಾಸು, ಗುಪ್ತಚರ, ಸಹಕಾರ, ಸಿಬ್ಬಂದಿ ಆಡಳಿತ ಸುಧಾರಣೆ
2.ಡಾ. ಜಿ ಪರಮೇಶ್ವರ – ಉಪಮುಖ್ಯಮಂತ್ರಿ – ಕಂದಾಯ, ಯುವ ಸಬಲೀಕರಣ
3.ಕೆ.ಎಚ್ ಮುನಿಯಪ್ಪ – ಆಹಾರ
4.ಕೆ.ಜೆ ಜಾರ್ಜ್ – ಇಂಧನ, ಪ್ರವಾಸೋದ್ಯಮ
5.ಎಂ.ಬಿ ಪಾಟೀಲ್ – ಬೃಹತ್ ಕೈಗಾರಿಕೆ
6.ರಾಮಲಿಂಗಾ ರೆಡ್ಡಿ – ಜಲಸಂಪನ್ಮೂಲ
7.ಸತೀಶ್ ಜಾರಕಿಹೊಳಿ – ಲೋಕೋಪಯೋಗಿ
8.ಕೃಷ್ಣ ಬೈರೇಗೌಡ – ಬೆಂಗಳೂರು ಅಭಿವೃದ್ದಿ
9.ಪ್ರಿಯಾಂಕ್ ಖರ್ಗೆ – ಗೃಹ, ಐಟಿಬಿಟಿ
10.ಯುಟಿ ಖಾದರ್ – ಆರೋಗ್ಯ
11.ಈಶ್ವರ್ ಖಂಡ್ರೆ – ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ
12.ಡಾ.ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ದಿ, ಹಿಂದುಳಿದ ಕಲ್ಯಾಣ
13.ಬೈರತಿ ಸುರೇಶ್ – ಸಾರಿಗೆ
14.ಡಾ.ಶರಣ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ
ಇದರೊಂದಿಗೆ ಹಣಕಾಸು, ಗೃಹ, ಕಂದಾಯ, ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.
ಪ್ರಮುಖ ಖಾತೆಗಳಿಗಾಗಿ ಪಟ್ಟು ಹಿಡಿದಿದ್ದ ಹಿರಿಯ ಸಚಿವರು ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಕಾರ್ಯ ನಿರ್ವಹಿಸಿದ ಖಾತೆಗಳನ್ನೇ ನೀಡಿ, ಅಲ್ಲಿ ಇನ್ನೂ ಕೆಲ ಅತೀಮುಖ್ಯ ಕಾರ್ಯ ಯೋಜನೆಗಳು ಬಾಕಿ ಉಳಿದಿದ್ದು, ಅವುಗಳನ್ನು ಪೂರ್ಣಗೊಳಿಸಬೇಕಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿದ್ದರು. ಹೀಗಾಗಿ ಹಲವು ಸಚಿವರಿಗೆ ಈ ಹಿಂದೆ ನೀಡಿದ್ದ ಖಾತೆಗಳನ್ನು ನೀಡಲಾಗಿದೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…