ಸಿಎಂ, ಡಿಸಿಎಂ, ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ ಹಂಚಿಕೆ ಮಾಡಿದ್ದಾರೆ.

1. ಡಿ.ಕೆ ಶಿವಕುಮಾರ್ – ಮುಖ್ಯಮಂತ್ರಿ – ಹಣಕಾಸು, ಗುಪ್ತಚರ, ಸಹಕಾರ, ಸಿಬ್ಬಂದಿ ಆಡಳಿತ ಸುಧಾರಣೆ

2.ಡಾ. ಜಿ ಪರಮೇಶ್ವರ – ಉಪಮುಖ್ಯಮಂತ್ರಿ – ಕಂದಾಯ, ಯುವ ಸಬಲೀಕರಣ

3.ಕೆ.ಎಚ್ ಮುನಿಯಪ್ಪ – ಆಹಾರ

4.ಕೆ.ಜೆ ಜಾರ್ಜ್ – ಇಂಧನ, ಪ್ರವಾಸೋದ್ಯಮ

5.ಎಂ.ಬಿ ಪಾಟೀಲ್ – ಬೃಹತ್ ಕೈಗಾರಿಕೆ

6.ರಾಮಲಿಂಗಾ ರೆಡ್ಡಿ – ಜಲಸಂಪನ್ಮೂಲ

7.ಸತೀಶ್ ಜಾರಕಿಹೊಳಿ – ಲೋಕೋಪಯೋಗಿ

8.ಕೃಷ್ಣ ಬೈರೇಗೌಡ – ಬೆಂಗಳೂರು ಅಭಿವೃದ್ದಿ

9.ಪ್ರಿಯಾಂಕ್ ಖರ್ಗೆ – ಗೃಹ, ಐಟಿಬಿಟಿ

10.ಯುಟಿ ಖಾದರ್ – ಆರೋಗ್ಯ

11.ಈಶ್ವರ್ ಖಂಡ್ರೆ – ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ

12.ಡಾ.ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ದಿ, ಹಿಂದುಳಿದ ಕಲ್ಯಾಣ

13.ಬೈರತಿ ಸುರೇಶ್ – ಸಾರಿಗೆ

14.ಡಾ.ಶರಣ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ

ಇದರೊಂದಿಗೆ ಹಣಕಾಸು, ಗೃಹ, ಕಂದಾಯ, ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.

ಪ್ರಮುಖ ಖಾತೆಗಳಿಗಾಗಿ ಪಟ್ಟು ಹಿಡಿದಿದ್ದ ಹಿರಿಯ ಸಚಿವರು ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಕಾರ್ಯ ನಿರ್ವಹಿಸಿದ ಖಾತೆಗಳನ್ನೇ ನೀಡಿ, ಅಲ್ಲಿ ಇನ್ನೂ ಕೆಲ ಅತೀಮುಖ್ಯ ಕಾರ್ಯ ಯೋಜನೆಗಳು ಬಾಕಿ ಉಳಿದಿದ್ದು, ಅವುಗಳನ್ನು ಪೂರ್ಣಗೊಳಿಸಬೇಕಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿದ್ದರು. ಹೀಗಾಗಿ ಹಲವು ಸಚಿವರಿಗೆ ಈ ಹಿಂದೆ ನೀಡಿದ್ದ ಖಾತೆಗಳನ್ನು ನೀಡಲಾಗಿದೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

18 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

20 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

21 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 day ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago