ಸಿಎಂ ಪಟ್ಟ ತ್ಯಜಿಸಿದ ಸಿದ್ದರಾಮಯ್ಯ: ರಾಜೀನಾಮೆ ಬಳಿಕ ಭಾವನಾತ್ಮಕ ಮಾತು….!

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಭವನದಲ್ಲಿ ರಾಜ್ಯಪಾಲರ ಕಾರ್ಯದರ್ಶಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ರಾಜೀನಾಮೆಯನ್ನು ದೃಢಪಡಿಸಿದರು ಮತ್ತು 136 ಕ್ಕೂ ಹೆಚ್ಚು ಶಾಸಕರ ಬಲದೊಂದಿಗೆ ತಮ್ಮ ಸರ್ಕಾರವು ಸಂಪೂರ್ಣ ಬಹುಮತವನ್ನು ಹೊಂದಿರುವುದರಿಂದ ಮುಂದಿನ ನಿಯೋಜಿತ ಮುಖ್ಯಮಂತ್ರಿಯನ್ನು ತಮ್ಮ ಸ್ಥಾನಕ್ಕೆ ಆಹ್ವಾನಿಸುವಂತೆ ರಾಜ್ಯಪಾಲರನ್ನು ಕೇಳಿಕೊಂಡಿದ್ದಾರೆ..

ಎರಡು ಬಾರಿ ಕರ್ನಾಟಕದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

550 ಭರವಸೆಗಳಲ್ಲಿ, ಸುಮಾರು 300 ಭರವಸೆಗಳನ್ನು ಇಲ್ಲಿಯವರೆಗೆ ಈಡೇರಿಸಲಾಗಿದೆ, ಜೊತೆಗೆ ಐದು ಗ್ಯಾರಂಟಿಗಳು. ನಾನು ನೀಡಿದ ಭರವಸೆಗಳಿಂದ ವಿಮುಖನಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಮೇರು ನಟ ರಾಜಕುಮಾರ್ ಅವರು ಅಭಿಮಾನಿ ದೇವರು ಎಂದು ಕರೆಯುತ್ತಿದ್ದರು. ನಾನು ರಾಜಕಾರಣಿ, ನನಗೆ ಸಂವಿಧಾನವೇ ಧರ್ಮವಾಗಿದೆ. ಮತದಾರರೇ ನಮ್ಮ ಅಭಿಮಾನಿ ದೇವರು ಕನ್ನಡ ನಾಡಿನ ಏಳು ಕೋಟಿ ಜನರಿಗೆ ಸೇವೆ ಮಾಡುವ ಅವಕಾಶ ಸಿಕ್ಕಿತ್ತು ಎಂದು ಹೇಳಿದರು.

ನಾನು ಹಳ್ಳಿಯಿಂದ ಬಂದವನು. ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ಸಿಎಂ ಆಗುತ್ತೇನೆ ಎಂಬ ಕನಸು ಕಂಡಿಲ್ಲ. ರಾಜ ಕಾರಣಕ್ಕೆ ಬಂದಿದ್ದು ಆಕಸ್ಮಿಕವಾಗಿತ್ತು. ರಾಜಕಾರಣಕ್ಕೆ ಬಂದಂದಿನಿಂದ ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ತತ್ವದಲ್ಲಿ ನಂಬಿಕೆ ಇಟ್ಟುಕೊಂಡಿದ್ದೆ. ಸಂವಿಧಾನದಲ್ಲಿ ಅಪಾರ ಗೌರವ ಇಟ್ಟುಕೊಂಡವನು ಎಂದು ತಿಳಿಸಿದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago