ಸಿಎಂ ಪಟ್ಟ ತ್ಯಜಿಸಿದ ಸಿದ್ದರಾಮಯ್ಯ: ರಾಜೀನಾಮೆ ಬಳಿಕ ಭಾವನಾತ್ಮಕ ಮಾತು….!

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಭವನದಲ್ಲಿ ರಾಜ್ಯಪಾಲರ ಕಾರ್ಯದರ್ಶಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ರಾಜೀನಾಮೆಯನ್ನು ದೃಢಪಡಿಸಿದರು ಮತ್ತು 136 ಕ್ಕೂ ಹೆಚ್ಚು ಶಾಸಕರ ಬಲದೊಂದಿಗೆ ತಮ್ಮ ಸರ್ಕಾರವು ಸಂಪೂರ್ಣ ಬಹುಮತವನ್ನು ಹೊಂದಿರುವುದರಿಂದ ಮುಂದಿನ ನಿಯೋಜಿತ ಮುಖ್ಯಮಂತ್ರಿಯನ್ನು ತಮ್ಮ ಸ್ಥಾನಕ್ಕೆ ಆಹ್ವಾನಿಸುವಂತೆ ರಾಜ್ಯಪಾಲರನ್ನು ಕೇಳಿಕೊಂಡಿದ್ದಾರೆ..

ಎರಡು ಬಾರಿ ಕರ್ನಾಟಕದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

550 ಭರವಸೆಗಳಲ್ಲಿ, ಸುಮಾರು 300 ಭರವಸೆಗಳನ್ನು ಇಲ್ಲಿಯವರೆಗೆ ಈಡೇರಿಸಲಾಗಿದೆ, ಜೊತೆಗೆ ಐದು ಗ್ಯಾರಂಟಿಗಳು. ನಾನು ನೀಡಿದ ಭರವಸೆಗಳಿಂದ ವಿಮುಖನಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಮೇರು ನಟ ರಾಜಕುಮಾರ್ ಅವರು ಅಭಿಮಾನಿ ದೇವರು ಎಂದು ಕರೆಯುತ್ತಿದ್ದರು. ನಾನು ರಾಜಕಾರಣಿ, ನನಗೆ ಸಂವಿಧಾನವೇ ಧರ್ಮವಾಗಿದೆ. ಮತದಾರರೇ ನಮ್ಮ ಅಭಿಮಾನಿ ದೇವರು ಕನ್ನಡ ನಾಡಿನ ಏಳು ಕೋಟಿ ಜನರಿಗೆ ಸೇವೆ ಮಾಡುವ ಅವಕಾಶ ಸಿಕ್ಕಿತ್ತು ಎಂದು ಹೇಳಿದರು.

ನಾನು ಹಳ್ಳಿಯಿಂದ ಬಂದವನು. ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ಸಿಎಂ ಆಗುತ್ತೇನೆ ಎಂಬ ಕನಸು ಕಂಡಿಲ್ಲ. ರಾಜ ಕಾರಣಕ್ಕೆ ಬಂದಿದ್ದು ಆಕಸ್ಮಿಕವಾಗಿತ್ತು. ರಾಜಕಾರಣಕ್ಕೆ ಬಂದಂದಿನಿಂದ ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ತತ್ವದಲ್ಲಿ ನಂಬಿಕೆ ಇಟ್ಟುಕೊಂಡಿದ್ದೆ. ಸಂವಿಧಾನದಲ್ಲಿ ಅಪಾರ ಗೌರವ ಇಟ್ಟುಕೊಂಡವನು ಎಂದು ತಿಳಿಸಿದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

20 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago