ಸಿಎಂ ಬೊಮ್ಮಾಯಿ ಅವರ ಕಾರು ತಡೆದು ತಪಾಸಣೆ: ತಾಲೂಕಿನ ಹೊಸಹುಡ್ಯ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳಿಂದ ತಪಾಸಣೆ

ಬೆಂಗಳೂರಿನಿಂದ ಕುಟುಂಬ‌ ಸಮೇತ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರ ಕಾರನ್ನು ಹೊಸಹುಡ್ಯ ಚೆಕ್ ಪೋಸ್ಟ್ ನಲ್ಲಿ ತಪಾಸಣೆಯನ್ನ ಪೊಲೀಸರು ನಡೆಸಿದ್ದಾರೆ.

ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ ವ್ಯಕ್ತವಾಗಿದೆ, ಚುನಾವಣೆ ಹಿನ್ನೆಲೆ ಅಕ್ರಮ ಹಣಕಾಸು ಮತ್ತು ಮದ್ಯ ಸಾಗಾಟಕ್ಕೆ ಕಡಿವಾಣ ಹಾಕಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ 6 ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಲಾಗಿದೆ. ವಾಹನಗಳ ತಪಾಸಣೆ ವೇಳೆ ಮುಖ್ಯಮಂತ್ರಿಗಳೆಂಬ ಕಾರಣಕ್ಕೆ ವಿನಾಯಿತಿ ನೀಡದ ಪೊಲೀಸರು ಅವರ ಕಾರನ್ನು ತಪಾಸಣೆ ಮಾಡುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ತಪಾಸಣೆ ವೇಳೆ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ನಾಗರಾಜು ಸೇರಿದಂತೆ ಚುನಾವಣಾ ಸಿಬ್ಬಂದಿ ಹಾಜರಿದ್ದರು.

Leave a Reply

Your email address will not be published. Required fields are marked *