ಬೆಂಗಳೂರಿನಿಂದ ಕುಟುಂಬ ಸಮೇತ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರ ಕಾರನ್ನು ಹೊಸಹುಡ್ಯ ಚೆಕ್ ಪೋಸ್ಟ್ ನಲ್ಲಿ ತಪಾಸಣೆಯನ್ನ ಪೊಲೀಸರು ನಡೆಸಿದ್ದಾರೆ.
ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ ವ್ಯಕ್ತವಾಗಿದೆ, ಚುನಾವಣೆ ಹಿನ್ನೆಲೆ ಅಕ್ರಮ ಹಣಕಾಸು ಮತ್ತು ಮದ್ಯ ಸಾಗಾಟಕ್ಕೆ ಕಡಿವಾಣ ಹಾಕಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ 6 ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಲಾಗಿದೆ. ವಾಹನಗಳ ತಪಾಸಣೆ ವೇಳೆ ಮುಖ್ಯಮಂತ್ರಿಗಳೆಂಬ ಕಾರಣಕ್ಕೆ ವಿನಾಯಿತಿ ನೀಡದ ಪೊಲೀಸರು ಅವರ ಕಾರನ್ನು ತಪಾಸಣೆ ಮಾಡುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ತಪಾಸಣೆ ವೇಳೆ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ನಾಗರಾಜು ಸೇರಿದಂತೆ ಚುನಾವಣಾ ಸಿಬ್ಬಂದಿ ಹಾಜರಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…