ಸಿಎಂ ಬೊಮ್ಮಾಯಿ‌ ಭರ್ಜರಿ ರೋಡ್ ಶೋ; ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ಮತಯಾಚನೆ

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಧೀರಜ್ ಮುನಿರಾಜು ಪರವಾಗಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಇಂದು ಬೃಹತ್ ರೋಡ್ ಶೋ‌ ನಡೆಸಿ ಮತಯಾಚನೆ ಮಾಡಿದರು.

ಅತಿ ಚಿಕ್ಕ ವಯಸ್ಸಿನ ದೊಡ್ಡ ಸಾಧನೆ ಮಾಡುವ ಉತ್ಸಾಹಿ ಯುವ ಅಭ್ಯರ್ಥಿ ಧೀರಜ್ ಮುನಿರಾಜ್ ಅವರಿಗೆ ದೊಡ್ಡ ಮನಸ್ಸಿನ ದೊಡ್ಡಬಳ್ಳಾಪುರ ಜನತೆ ದೊಡ್ಡಮಟ್ಟದಲ್ಲಿ ಆಶೀರ್ವಾದ ಮಾಡಿ ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದ ಸಿಎಂ ಬೊಮ್ಮಾಯಿ‌.

ದೊಡ್ಡಬಳ್ಳಾಪುರದ ಸಮಗ್ರ ಅಭಿವೃದ್ದಿಗೆ ನಮ್ಮ ಸರ್ಕಾರ ಕಂಕಣಬದ್ಧವಾಗಿದೆ, ನೇಕಾರರ ವಿದ್ಯುತ್ ಸಬ್ಸಿಡಿಯನ್ನು ಸರ್ಕಾರವೇ ಭರಿಸಲಿದೆ, ಬೆಂಗಳೂರಿಗೆ ನೇರವಾಗಿ ಸಂಪರ್ಕ ಕಲ್ಪಿಸುವ ಸ್ಯಾಟಲೈಟ್ ಟೌನ್ ದೊಡ್ಡಬಳ್ಳಾಪುರದಲ್ಲಿ ನಿರ್ಮಾಣ ಮಾಡಲು ಯೋಜನೆ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ‌ ತಿಳಿಸಿದರು.

ನೇಕಾರ ಸಮ್ಮಾನ್ ಯೋಜನೆ ಪ್ರಾರಂಭ ಮಾಡಿದ್ದು ನಮ್ಮ ನಾಯಕರಾದ ಯಡಿಯೂರಪ್ಪನವರು, ನೇಕಾರ ಸಮ್ಮಾನ್ ಯೋಜನೆಯ ಕೈಮಗ್ಗ ನೇಕಾರರಿಗೆ ಇದ್ದ ಯೋಜನೆಯನ್ನು ಪವರ್ ಲೂಮ್ಸ್ ಯೋಜನೆಗೂ ವಿಸ್ತರಿಸಿದ್ದು ನಮ್ಮ ಸರ್ಕಾರ, 1.10 ಲಕ್ಷ ಪವರ್ ಲೂಮ್ಸ್ ನೇಕಾರರಿಗೆ ಹಣ ಸಹಾಯ ಮಾಡಿದ್ದೂ ನಮ್ಮ ಸರ್ಕಾರ ಎಂದರು.

ಶೂನ್ಯ ಬಡ್ಡಿಯ ಸಾಲ 2 ಲಕ್ಷದಿಂದ 5 ಲಕ್ಷಕ್ಕೆ ಏರಿಸಿದ್ದೂ ನಮ್ಮ ಸರ್ಕಾರ, ತಳ ಸಮುದಾಯವನ್ನು ಸ್ವಾವಲಂಭಿಗಳನ್ನಾಗಿ ಮಾಡುತ್ತಿರುವುದು ಬಿಜೆಪಿ ಸರ್ಕಾರ. ಬೆಂಗಳೂರಿನ ಎಲ್ಲಾ ವ್ಯವಸ್ಥೆ ದೊಡ್ಡಬಳ್ಳಾಪುರದಲ್ಲಿ ಸಿಗಲಿದೆ ಎಂದರು.

ನಗರದ ನೆಲದಾಂಜನೇಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭವಾದ ರೋಡ್ ಶೋ ನಲ್ಲಿ ಮುಖ್ಯಮಂತ್ರಿ‌ ಬಸವರಾಜ ಬೊಮ್ಮಾಯಿ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು, ಸಚಿವ ಡಾ.ಕೆ.ಸುಧಾಕರ್, ಯಲಹಂಕ‌ ಶಾಸಕ ಎಸ್.ಆರ್.ವಿಶ್ವನಾಥ್ ಸೇರಿದಂತೆ ಹಲವು‌ ಮುಖಂಡರು ಮೆರವಣಿಗೆಯಲ್ಲಿ‌ ಭಾಗವಹಿಸಿದ್ದರು.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

30 minutes ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

11 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

12 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

16 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

23 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

24 hours ago