ಸಿಎಂ- ಯತೀಂದ್ರ ನಡುವಿನ ಸಂಭಾಷಣೆ: ಕುಮಾರಸ್ವಾಮಿ ವಿಕೃತ ಮನಸ್ಥಿತಿ ಪ್ರದರ್ಶನ- ದೇವೇಗೌಡರಾದರೂ ಮಗನಿಗೆ ಬುದ್ಧಿ ಹೇಳಬೇಕು- ಸಿದ್ದರಾಮಯ್ಯ ವಾಗ್ದಾಳಿ

ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನಮಗನ ನಡುವಿನ ಪೋನ್ ಸಂಭಾಷಣೆಗೆ ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ.ಸಿಎಸ್ ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಫಲಾನುಭವಿ ಶಾಲೆಗಳ ಪಟ್ಟಿ ಬಗ್ಗೆ ನನ್ನ ಜೊತೆ ಮಾತನಾಡಿದ್ದರು. ಕ್ಷೇತ್ರದ ಜನರ ಎದುರಿನಲ್ಲಿಯೇ ನಡೆದಿರುವ ಈ ಸಂಭಾಷಣೆಯನ್ನು ವರ್ಗಾವಣೆಗಾಗಿ ವಸೂಲಿ ಎಂಬ ಅರ್ಥ ಬರುವ ಹಾಗೆ ತಿರುಚಿರುವ ಕುಮಾರಸ್ವಾಮಿ ಅವರು ತಮ್ಮ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕುಮಾರಸ್ವಾಮಿಯವರು ರಾಜಕೀಯಕ್ಕೆ ಪ್ರವೇಶ ಮಾಡಿದ ದಿನದಿಂದ ನಿರಂತರವಾಗಿ ಕಪೋಲ ಕಲ್ಪಿತ ಆರೋಪಗಳ ಮೂಲಕ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಬಾಯಿಗೆ ಬಂದಂತೆ ಮಾತನಾಡುತ್ತಾ ಬರುತ್ತಿದ್ದುದನ್ನು ರಾಜ್ಯದ ಜನ ಕಂಡಿದ್ದಾರೆ. ಈಗ ತಂದೆಯಾದ ನನಗೆ ನೋವು ಕೊಡಬೇಕೆಂಬ ಏಕೈಕ ದುರುದ್ದೇಶದಿಂದ ಡಾ.ಯತೀಂದ್ರ ಅವರನ್ನು ಗುರಿಯಾಗಿಸಿಕೊಂಡು ಪ್ರತಿನಿತ್ಯ ಸುಳ್ಳು ಆರೋಪಗಳನ್ನು ಹರಿಬಿಡುತ್ತಿರುವುದು ಕುಮಾರಸ್ವಾಮಿಯವರ ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಆಕ್ರೋಶವ್ಯಕ್ಯಪಡಿಸಿದ್ದಾರೆ.

ಶಾಸಕ ಸ್ಥಾನವನ್ನೇ ತ್ಯಾಗ ಮಾಡಿದರೂ ಜನಸೇವೆಯಿಂದ ಹಿಂದೆ ಸರಿಯದ ಡಾ.ಯತೀಂದ್ರ ಅವರು ವರುಣ ಕ್ಷೇತ್ರದ ಅಭಿವೃದ್ದಿಯಲ್ಲಿ ಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರನ್ನು ನೈತಿಕವಾಗಿ ಕುಗ್ಗಿಸುವ ದುರುದ್ದೇಶದಿಂದ ಕುಮಾರಸ್ವಾಮಿಯವರು ಪ್ರತಿನಿತ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ.

ತಮ್ಮ ಪತ್ನಿ ಮತ್ತು ಮಗ ಕೂಡಾ ರಾಜಕೀಯ ಕ್ಷೇತ್ರದಲ್ಲಿದ್ದಾರೆ ಎನ್ನುವುದನ್ನು ಹೆಚ್.ಡಿ.ಕುಮಾರಸ್ವಾಮಿ ಮರೆತಂತಿದೆ. ನಾನು ಕುಮಾರಸ್ವಾಮಿಯವರ ಮಟ್ಟಕ್ಕೆ ಇಳಿದು ಅವರ ರೀತಿ ಅವರ ಪತ್ನಿ ಮತ್ತು ಮಗನ ಬಗ್ಗೆ ಮಾತನಾಡಲಾರೆ. ಕನಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಾದರೂ ಮಗನಿಗೆ ಬುದ್ದಿ ಹೇಳಿ ರಾಜ್ಯದ ಜನರಿಂದ ಮಗ ಛೀಮಾರಿಗೆ ಈಡಾಗುತ್ತಿರುವುದನ್ನು ತಪ್ಪಿಸಬೇಕೆಂದು ಕೋರುತ್ತೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

10 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

18 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

23 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago