ಸಿಎಂ- ಯತೀಂದ್ರ ನಡುವಿನ ಸಂಭಾಷಣೆ: ಕುಮಾರಸ್ವಾಮಿ ವಿಕೃತ ಮನಸ್ಥಿತಿ ಪ್ರದರ್ಶನ- ದೇವೇಗೌಡರಾದರೂ ಮಗನಿಗೆ ಬುದ್ಧಿ ಹೇಳಬೇಕು- ಸಿದ್ದರಾಮಯ್ಯ ವಾಗ್ದಾಳಿ

ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನಮಗನ ನಡುವಿನ ಪೋನ್ ಸಂಭಾಷಣೆಗೆ ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ.ಸಿಎಸ್ ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಫಲಾನುಭವಿ ಶಾಲೆಗಳ ಪಟ್ಟಿ ಬಗ್ಗೆ ನನ್ನ ಜೊತೆ ಮಾತನಾಡಿದ್ದರು. ಕ್ಷೇತ್ರದ ಜನರ ಎದುರಿನಲ್ಲಿಯೇ ನಡೆದಿರುವ ಈ ಸಂಭಾಷಣೆಯನ್ನು ವರ್ಗಾವಣೆಗಾಗಿ ವಸೂಲಿ ಎಂಬ ಅರ್ಥ ಬರುವ ಹಾಗೆ ತಿರುಚಿರುವ ಕುಮಾರಸ್ವಾಮಿ ಅವರು ತಮ್ಮ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕುಮಾರಸ್ವಾಮಿಯವರು ರಾಜಕೀಯಕ್ಕೆ ಪ್ರವೇಶ ಮಾಡಿದ ದಿನದಿಂದ ನಿರಂತರವಾಗಿ ಕಪೋಲ ಕಲ್ಪಿತ ಆರೋಪಗಳ ಮೂಲಕ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಬಾಯಿಗೆ ಬಂದಂತೆ ಮಾತನಾಡುತ್ತಾ ಬರುತ್ತಿದ್ದುದನ್ನು ರಾಜ್ಯದ ಜನ ಕಂಡಿದ್ದಾರೆ. ಈಗ ತಂದೆಯಾದ ನನಗೆ ನೋವು ಕೊಡಬೇಕೆಂಬ ಏಕೈಕ ದುರುದ್ದೇಶದಿಂದ ಡಾ.ಯತೀಂದ್ರ ಅವರನ್ನು ಗುರಿಯಾಗಿಸಿಕೊಂಡು ಪ್ರತಿನಿತ್ಯ ಸುಳ್ಳು ಆರೋಪಗಳನ್ನು ಹರಿಬಿಡುತ್ತಿರುವುದು ಕುಮಾರಸ್ವಾಮಿಯವರ ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಆಕ್ರೋಶವ್ಯಕ್ಯಪಡಿಸಿದ್ದಾರೆ.

ಶಾಸಕ ಸ್ಥಾನವನ್ನೇ ತ್ಯಾಗ ಮಾಡಿದರೂ ಜನಸೇವೆಯಿಂದ ಹಿಂದೆ ಸರಿಯದ ಡಾ.ಯತೀಂದ್ರ ಅವರು ವರುಣ ಕ್ಷೇತ್ರದ ಅಭಿವೃದ್ದಿಯಲ್ಲಿ ಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರನ್ನು ನೈತಿಕವಾಗಿ ಕುಗ್ಗಿಸುವ ದುರುದ್ದೇಶದಿಂದ ಕುಮಾರಸ್ವಾಮಿಯವರು ಪ್ರತಿನಿತ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ.

ತಮ್ಮ ಪತ್ನಿ ಮತ್ತು ಮಗ ಕೂಡಾ ರಾಜಕೀಯ ಕ್ಷೇತ್ರದಲ್ಲಿದ್ದಾರೆ ಎನ್ನುವುದನ್ನು ಹೆಚ್.ಡಿ.ಕುಮಾರಸ್ವಾಮಿ ಮರೆತಂತಿದೆ. ನಾನು ಕುಮಾರಸ್ವಾಮಿಯವರ ಮಟ್ಟಕ್ಕೆ ಇಳಿದು ಅವರ ರೀತಿ ಅವರ ಪತ್ನಿ ಮತ್ತು ಮಗನ ಬಗ್ಗೆ ಮಾತನಾಡಲಾರೆ. ಕನಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಾದರೂ ಮಗನಿಗೆ ಬುದ್ದಿ ಹೇಳಿ ರಾಜ್ಯದ ಜನರಿಂದ ಮಗ ಛೀಮಾರಿಗೆ ಈಡಾಗುತ್ತಿರುವುದನ್ನು ತಪ್ಪಿಸಬೇಕೆಂದು ಕೋರುತ್ತೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago