Categories: ಕೋಲಾರ

ಸಿಎಂ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಕೋಲಾರ: ರಾಜ್ಯದಲ್ಲಿನ ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ‌ ನಡೆಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಿಂದ ಮೆರವಣಿಗೆಯ ಮೂಲಕ ಮೆಕ್ಕೆ ವೃತ್ತಕ್ಕೆ ಆಗಮಿಸಿದ ಪ್ರತಿಭಟನಕಾರರು, ಬಿಜೆಪಿ, ಜೆಡಿಎಸ್‌, ಕೇಂದ್ರ ಸರಕಾರ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು ನಂತರ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಏಳಿಗೆಗಾಗಿ ಜನಪರವಾದ ಯೋಜನೆಗಳನ್ನು ಜಾರಿ ತಂದು ಜನರ ವಿಶ್ವಾಸವನ್ನು ಗಳಿಸಿದ್ದಾರೆ ಮುಂಬರುವ ತಾಪಂ ಜಿಪಂ ಸೇರಿದಂತೆ ವಿವಿಧ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಆಶೀರ್ವಾದ ಮಾಡಲಿದ್ದು ಹೇಗಾದರೂ ಮಾಡಿ ಸರಕಾರಕ್ಕೆ ಮತ್ತು ಸಿದ್ದರಾಮಯ್ಯ ನವರ ಆಡಳಿತಕ್ಕೆ ಕಪ್ಪು ಚುಕ್ಕೆ ತರುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಪಕ್ಷಗಳು ಒಳಸಂಚು ಮಾಡಲು ಹೊರಟಿದ್ದಾರೆ ನಮಗೆಲ್ಲ ನ್ಯಾಯಾಲಯದ ಮೇಲೆ ನಂಬಿಕೆ ಇದ್ದು ಮೈತ್ರಿ ಪಕ್ಷಗಳಿಗೆ ತಕ್ಕ ಉತ್ತರ ನೀಡಲಿದ್ದು ಜನ ಯಾವತ್ತೂ ಇದ್ದರೂ ಕಾಂಗ್ರೆಸ್ ಪಕ್ಷದೊಂದಿಗೆ ಇದ್ದಾರೆ ಎಂದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾಲೂರು ಶಾಸಕ ಕೆ.ವೈ ನಂಜೇಗೌಡ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರದ ಆಡಳಿತವನ್ನು ಸಹಿಸದ ಮೈತ್ರಿ ಪಕ್ಷಗಳು ಸಿದ್ದರಾಮಯ್ಯ ಅವರ ರಾಜೀನಾಮೆ ಮೂಲಕ ಅಧಿಕಾರದ ಹಗಲು ಕನಸು ಕಾಣುತ್ತಿದ್ದಾರೆ ರಾಜ್ಯದ ಜನರು ಸೇರಿದಂತೆ 136 ಶಾಸಕರು ಸೇರಿದಂತೆ ಸಚಿವ ಸಂಪುಟದ ಸಚಿವರು ಸಿದ್ದರಾಮಯ್ಯ ಪರವಾಗಿದ್ದಾರೆ ಹಿಂದಿನ ಬಿಜೆಪಿ ಸರಕಾರದ 40 % ಕಮಿಷನ್ ವಿರುದ್ದ ರಾಜ್ಯಪಾಲರಿಗೆ ದೂರುಗಳು ಕೊಟ್ಟಾಗ ಯಾಕೆ ಕ್ರಮ ವಹಿಸಲಿಲ್ಲ ರಾಜ್ಯಪಾಲರು ಒಂದು ಪಕ್ಷದ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಹಳ್ಳಿಗಳಿಂದ ಜನ ಮೈತ್ರಿ ಪಕ್ಷಗಳ ವಿರುದ್ದ ತಿರುಗಿ ಬೀಳಲಿದ್ದಾರೆ ಎಂದರು.

ಪ್ರತಿಭಟನೆಯನ್ನು ಉದ್ದೇಶಿಸಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿರುವ ರಾಜ್ಯಪಾಲರ ಕಛೇರಿಯು ಇವತ್ತು ಬಿಜೆಪಿ ಪಕ್ಷದ ಕಛೇರಿಯಾಗಿದೆ ಕೇಂದ್ರ ಸರಕಾರದ ಕೈಗೊಂಬೆಯ ರೀತಿಯಲ್ಲಿ ಅಧಿಕಾರ ಚಲಾಯಿಸುತ್ತಿದ್ದಾರೆ ಇವತ್ತು ಜನತೆಯ ಪರವಾಗಿ ನ್ಯಾಯಕೇಳಕ್ಕೆ ನಾವು ಬಂದಿದ್ದೇವೆ ಹಿಂದೆ ಸರಕಾರದಲ್ಲಿ ಬಸವರಾಜ ಬೊಮ್ಮಾಯಿ ಸಿಎಂ ಆಗಿ ಬೈರತಿ ಬಸವರಾಜ್ ಉಸ್ತುವಾರಿ ಸಚಿವರಾಗಿ ಬಿಜೆಪಿ ನೇತೃತ್ವದ ಸರಕಾರವೇ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ ಸಿದ್ದರಾಮಯ್ಯ40 ವರ್ಷಗಳ ಸುದೀರ್ಘ ರಾಜಕೀಯ ಇತಿಹಾಸದಲ್ಲಿ ಕಳಂಕ ರಹಿತ ರಾಜಕಾರಣಿಗೆ ಕಳಂಕವನ್ನು ತರಬೇಕು ಎಂಬ ಉದ್ದೇಶದಿಂದ ಪಾದಯಾತ್ರೆ ಮಾಡಿದ್ದಾರೆ ಇವರಿಗೆ ಯಾವುದೇ ನೈತಿಕತೆ ಇಲ್ಲ ಹಿಂದೆ ಬಿಜೆಪಿ ಸರಕಾರದ ವಿರುದ್ದ ದೂರು ಕೊಟ್ಟಾಗ ಮೌನವಾಗಿದ್ದ ರಾಜ್ಯಪಾಲರು ಇವತ್ತು ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡವರು ದೂರು ಕೊಟ್ಟರೆ ನೋಟೀಸ್ ಕೊಡತ್ತಾರೆ ಎಂದರೆ ರಾಜ್ಯಪಾಲರ ಯಾರ ಪರವಾಗಿದ್ದಾರೆ ಕುಮಾರಸ್ವಾಮಿಯ ಊರು ಯಾವುದು ಅವರಿಗೆ ಮುಡಾದಲ್ಲಿ ಸೈಟ್ ಎಲ್ಲಿಂದ ಬಂದಿದೆ ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಒಬ್ಬ ಬ್ರೋಕರ್ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ, ಜೆಡಿಎಸ್‌ ಐಟಿ ಸೆಲ್ ಅಧ್ಯಕ್ಷ ಸ್ನೇಹಮಯಿ ಕೃಷ್ಣ ಮತ್ತು ಬಿಜೆಪಿ ಶಾಸಕರ ಸಂಬಂದಿ ಪ್ರದೀಪ್ ದೂರು ಕೊಟ್ಟಿದ್ದಾರೆ ಯಾವುದೇ ತನಿಖಾ ಸಂಸ್ಥೆಯ ಮೂಲಕ ತನಿಖೆ ನಡೆಸದೇ ಏಕಾಏಕಿ ಸಿಎಂ ವಿರುದ್ಧ ನೋಟೀಸ್ ನೀಡಿದ್ದಾರೆ ದೇಶದಲ್ಲಿ ಬಿಜೆಪಿ ನೇತೃತ್ವದಲ್ಲಿ ಇಲ್ಲದ ಪಕ್ಷಗಳ ವಿರುದ್ದ ಕೇಂದ್ರ ಸರಕಾರದ ನೇತೃತ್ವದ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿದ್ದಾರೆ ಸಂವಿಧಾನಕ್ಕೆ ಅಗೌರವ ತೋರುವ ಮೈತ್ರಿ ಪಕ್ಷಗಳ ವಿರುದ್ದ ಹಳ್ಳಿಗಳಿಂದ ಪ್ರತಿಭಟನೆ ನಡೆಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ವಿ.ಆದಿನಾರಾಯಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು, ಸೀಸಂದ್ರ ಗೋಪಾಲಗೌಡ, ಮುಖಂಡರಾದ ಗದ್ದೆಕಣ್ಣೂರು ದಯಾನಂದ್, ಚಂಜಿಮಲೆ ರಮೇಶ್, ಕೆ.ಜಯದೇವ್, ನಾಗರಾಜ್, ಮೈಲಾಂಡಹಳ್ಳಿ ಮುರಳಿ, ರವಿರಾಮಸ್ವಾಮಿ, ಹೊನ್ನೇನಹಳ್ಳಿ ಯಲ್ಲಪ್ಪ, ರಂಗನಾಥ್, ವೈ. ಶಿವಕುಮಾರ್, ರತ್ನಮ್ಮ, ಮಮತಾರೆಡ್ಡಿ, ವಕ್ಕಲೇರಿ ರಾಜಪ್ಪ, ಅಂಬರೀಶ್, ಆಫ್ಸರ್, ಷಂಷೀರ್, ಮಂಜುನಾಥ್, ಯುವ ಕಾಂಗ್ರೆಸ್ ಸುನಿಲ್ ನಂಜೇಗೌಡ, ಅಫ್ರಿದ್, ಉರಟಾಗ್ರಹಾರ ಚೌಡರೆಡ್ಡಿ ಮುಂತಾದವರು ಇದ್ದರು

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

50 minutes ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

13 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

14 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

16 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

17 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

22 hours ago