ಸಿಎಂ ಸಿದ್ದರಾಮಯ್ಯ ‘ಕಾಸ್ಟ್ಲಿ ಡೀಸೆಲ್’ ಎಂದು ಲೇವಡಿ ಮಾಡಿದ ಬಿಜೆಪಿ

ಸಾರಿಗೆ ನಿಗಮಗಳಿಗೆ ನೀಡಬೇಕಾದ ಅನುದಾನವನ್ನು ಬಾಕಿ ಉಳಿಸಿಕೊಂಡ ಸಿದ್ದರಾಮಯ್ಯ ಸರ್ಕಾರ ಇದೀಗ 2 ರೂ. ಡಿಸೇಲ್‌ ದರ ಏರಿಕೆ ಮಾಡಿ ಸಾರಿಗೆ ನಿಗಮಗಳ ತಲೆ ಮೇಲೆ ಚಪ್ಪಡಿ ಕಲ್ಲು ಏಳೆದಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಡಿಸೇಲ್‌ ದರ ಹೆಚ್ಚಳದಿಂದ ನಷ್ಟ ಅನುಭವಿಸುತ್ತಿವೆ. ಹೀಗಾಗಿ ನಷ್ಟ ಸರಿದೊಗಿಸಿಕೊಳ್ಳಲು ಬಸ್‌ ಪ್ರಯಾಣ ದರ ಏರಿಸಲು ಚಿಂತನೆ ನಡೆಸಿವೆ ಎಂದು ದೂರಿದೆ.

ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರೇ, ಸಾರಿಗೆ ನಿಗಮಗಳನ್ನು ಮುಚ್ಚಿ ಖಾಸಗಿಗೆ ವಹಿಸಲು ಚಿಂತನೆ ನಡೆಸಿದ್ದರೆ ಬಹಿರಂಗಪಡಿಸಿ, ಹೀಗೆ ಹಂತ ಹಂತವಾಗಿ ಸಾರಿಗೆ ನಿಗಮಗಳನ್ನು ದಿವಾಳಿ ಮಾಡಬೇಡಿ ಆಕ್ರೋಶ ವ್ಯಕ್ತಪಡಿಸಿದೆ.

ಅದೇರೀತಿ ಸಾಮಾಜಿಕ ಜಾಲತಾಣಗಳಲ್ಲಿ ನಟ ವಿನ್ ಡೀಸೆಲ್ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರ ಎಡಿಟ್ ಚಿತ್ರವನ್ನು ಹಂಚಿಕೊಂಡು, ಹಾಲಿವುಡ್ ನಲ್ಲಿ ವಿನ್ ಡೀಸೆಲ್ ಕಾಲ್ ಶೀಟ್ ಕಾಸ್ಟ್ಲಿ – ಕರ್ನಾಟಕದಲ್ಲಿ ಡೀಸೆಲ್ ರೇಟ್ ಸಹ ಕಾಸ್ಟ್ಲಿ!! ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರನ್ನು ‘ಕಾಸ್ಟ್ಲಿ ಡೀಸೆಲ್’ ಎಂದು ಲೇವಡಿ ಮಾಡಿದೆ.

Ramesh Babu

Journalist

Recent Posts

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

4 hours ago

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

9 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

20 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

1 day ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago