ಸಾರಿಗೆ ನಿಗಮಗಳಿಗೆ ನೀಡಬೇಕಾದ ಅನುದಾನವನ್ನು ಬಾಕಿ ಉಳಿಸಿಕೊಂಡ ಸಿದ್ದರಾಮಯ್ಯ ಸರ್ಕಾರ ಇದೀಗ 2 ರೂ. ಡಿಸೇಲ್ ದರ ಏರಿಕೆ ಮಾಡಿ ಸಾರಿಗೆ ನಿಗಮಗಳ ತಲೆ ಮೇಲೆ ಚಪ್ಪಡಿ ಕಲ್ಲು ಏಳೆದಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.
ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಡಿಸೇಲ್ ದರ ಹೆಚ್ಚಳದಿಂದ ನಷ್ಟ ಅನುಭವಿಸುತ್ತಿವೆ. ಹೀಗಾಗಿ ನಷ್ಟ ಸರಿದೊಗಿಸಿಕೊಳ್ಳಲು ಬಸ್ ಪ್ರಯಾಣ ದರ ಏರಿಸಲು ಚಿಂತನೆ ನಡೆಸಿವೆ ಎಂದು ದೂರಿದೆ.
ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರೇ, ಸಾರಿಗೆ ನಿಗಮಗಳನ್ನು ಮುಚ್ಚಿ ಖಾಸಗಿಗೆ ವಹಿಸಲು ಚಿಂತನೆ ನಡೆಸಿದ್ದರೆ ಬಹಿರಂಗಪಡಿಸಿ, ಹೀಗೆ ಹಂತ ಹಂತವಾಗಿ ಸಾರಿಗೆ ನಿಗಮಗಳನ್ನು ದಿವಾಳಿ ಮಾಡಬೇಡಿ ಆಕ್ರೋಶ ವ್ಯಕ್ತಪಡಿಸಿದೆ.
ಅದೇರೀತಿ ಸಾಮಾಜಿಕ ಜಾಲತಾಣಗಳಲ್ಲಿ ನಟ ವಿನ್ ಡೀಸೆಲ್ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರ ಎಡಿಟ್ ಚಿತ್ರವನ್ನು ಹಂಚಿಕೊಂಡು, ಹಾಲಿವುಡ್ ನಲ್ಲಿ ವಿನ್ ಡೀಸೆಲ್ ಕಾಲ್ ಶೀಟ್ ಕಾಸ್ಟ್ಲಿ – ಕರ್ನಾಟಕದಲ್ಲಿ ಡೀಸೆಲ್ ರೇಟ್ ಸಹ ಕಾಸ್ಟ್ಲಿ!! ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರನ್ನು ‘ಕಾಸ್ಟ್ಲಿ ಡೀಸೆಲ್’ ಎಂದು ಲೇವಡಿ ಮಾಡಿದೆ.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…