ಸಾರಿಗೆ ನಿಗಮಗಳಿಗೆ ನೀಡಬೇಕಾದ ಅನುದಾನವನ್ನು ಬಾಕಿ ಉಳಿಸಿಕೊಂಡ ಸಿದ್ದರಾಮಯ್ಯ ಸರ್ಕಾರ ಇದೀಗ 2 ರೂ. ಡಿಸೇಲ್ ದರ ಏರಿಕೆ ಮಾಡಿ ಸಾರಿಗೆ ನಿಗಮಗಳ ತಲೆ ಮೇಲೆ ಚಪ್ಪಡಿ ಕಲ್ಲು ಏಳೆದಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.
ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಡಿಸೇಲ್ ದರ ಹೆಚ್ಚಳದಿಂದ ನಷ್ಟ ಅನುಭವಿಸುತ್ತಿವೆ. ಹೀಗಾಗಿ ನಷ್ಟ ಸರಿದೊಗಿಸಿಕೊಳ್ಳಲು ಬಸ್ ಪ್ರಯಾಣ ದರ ಏರಿಸಲು ಚಿಂತನೆ ನಡೆಸಿವೆ ಎಂದು ದೂರಿದೆ.
ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರೇ, ಸಾರಿಗೆ ನಿಗಮಗಳನ್ನು ಮುಚ್ಚಿ ಖಾಸಗಿಗೆ ವಹಿಸಲು ಚಿಂತನೆ ನಡೆಸಿದ್ದರೆ ಬಹಿರಂಗಪಡಿಸಿ, ಹೀಗೆ ಹಂತ ಹಂತವಾಗಿ ಸಾರಿಗೆ ನಿಗಮಗಳನ್ನು ದಿವಾಳಿ ಮಾಡಬೇಡಿ ಆಕ್ರೋಶ ವ್ಯಕ್ತಪಡಿಸಿದೆ.
ಅದೇರೀತಿ ಸಾಮಾಜಿಕ ಜಾಲತಾಣಗಳಲ್ಲಿ ನಟ ವಿನ್ ಡೀಸೆಲ್ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರ ಎಡಿಟ್ ಚಿತ್ರವನ್ನು ಹಂಚಿಕೊಂಡು, ಹಾಲಿವುಡ್ ನಲ್ಲಿ ವಿನ್ ಡೀಸೆಲ್ ಕಾಲ್ ಶೀಟ್ ಕಾಸ್ಟ್ಲಿ – ಕರ್ನಾಟಕದಲ್ಲಿ ಡೀಸೆಲ್ ರೇಟ್ ಸಹ ಕಾಸ್ಟ್ಲಿ!! ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರನ್ನು ‘ಕಾಸ್ಟ್ಲಿ ಡೀಸೆಲ್’ ಎಂದು ಲೇವಡಿ ಮಾಡಿದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…