ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಮಳೆ ಬಂದಾಗ ಸಮಸ್ಯೆ ತಲೆದೋರಬಹುದಾದ ಕೆಲವು ಪ್ರಮುಖ ಸ್ಥಳಗಳು, ಮೆಟ್ರೋ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಸಂಚಾರ ದಟ್ಟಣೆ ಉಂಟಾಗಬಹುದಾದ ಪ್ರದೇಶಗಳಿಗೆ ಭೇಟಿ ನೀಡಿ, ಸಮಸ್ಯೆ ಬಗೆಹರಿಸುವ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ, ಸೂಚನೆ, ಆದೇಶ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಲಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಕೆಲವು ಸೂಚನೆ ನೀಡಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿ ಗೆ ಅವಕಾಶ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಬಳಿ ನೀರು ಹರಿಯುವ ಕಾಲುವೆಯಲ್ಲಿ ಹೂಳು ತುಂಬಿತ್ತು. ಜಾಸ್ತಿ ಮಳೆ ಸುರಿದಾಗ ಕಾಲುವೆಯಿಂದ ನೀರು ಉಕ್ಕಿ ಮೇಲಕ್ಕೆ ಬರುತ್ತಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿ.ಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿ.ಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು ಎಂದರು.
ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಚರಂಡಿಗಳು – ಕಾಲುವೆಗಳ ಹೂಳೆತ್ತಬೇಕು, ಒಣಗಿರುವ ಮರದ ಕೊಂಬೆಗಳನ್ನು ಕತ್ತರಿಸಲು ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5,500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು ಎಂದು ಸೂಚಿಸಿದರು.
ಈಜಿಪುರದಲ್ಲಿ ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಾಣ ನೆನೆಗುದಿಗೆ ಬಿದ್ದಿದ್ದು, ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಇವರ ಗುತ್ತಿಗೆ ರದ್ದು ಮಾಡಿ ಹೊಸಬರಿಗೆ ಕೊಡಲು ಸೂಚನೆ ನೀಡಿದರು.
ಮುಂಗಾರು ಮಳೆಗೂ ಮುನ್ನ ಪ್ರವಾಹ ಉಂಟಾಗಬಾರದೆಂಬ ಕಾರಣಕ್ಕೆ ಚುನಾವಣಾ ಆಯೋಗದಿಂದ ಅನುಮತಿ ಪಡೆದು 7-8 ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ ಎಂದರು.
ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ ನೀಡಿದ್ದೇನೆ.
ಗುಂಡಿಗಳು ಬಿದ್ದ ಕೂಡಲೇ ದುರಸ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಬಿಡಿಎ ನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಲು ಸೂಚಿಸಿದ್ದೇನೆ ಎಂದು ಹೇಳಿದರು.
ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿವೆ ಹಾಗೂ ಕೆಲವು ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಿದ್ದೇನೆ ಎಂದು ತಿಳಿಸಿದರು.
ಜೂನ್ ಗೆ ಮುಂಚೆಯೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪ್ರವಾಹ ಸಂಬಂಧಿ ಸ್ಥಳಗಳನ್ನು ಮಾತ್ರ ಪರಿಶೀಲಿಸಲು ಚುನಾವಣಾ ಆಯೋಗ ಅನುಮತಿ ನೀಡಿತ್ತು, ಅದರಂತೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದರು.
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…
ರಾಜ್ಯ ಸರ್ಕಾರವು ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ…