ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಶಾಸಕ ಧೀರಾಜ್ ಮುನಿರಾಜ್ ಒತ್ತಾಯ

ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠ  ವಜಾಗೊಳಿಸಿದೆ. ಈ ಸಂಬಂಧ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಲಾಗಿದೆ ಎಂದು ಆಂಧ್ರಪ್ರದೇಶದ ಎಂಎಲ್ಸಿ  ಪೊಂಗುಲೆಟ್ಟಿ ಸುಧಾಕರ್ ರೆಡ್ಡಿ ಅವರು ಹೇಳಿದರು.

ನಗರದ ಮಾರುಕಟ್ಟೆ ಚೌಕದಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್ ನ ತೀರ್ಪು ಸ್ವಾಗತಾರ್ಹ. ಈಗಾಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ. ರಾಜ್ಯದಲ್ಲಿ ವಾಲ್ಮೀಕಿ ಹಗರಣ, ಮೂಡಹಗರಣ ಸೇರಿದಂತೆ ಹಗರಣಗಳಲ್ಲೇ ಸರ್ಕಾರ ತುಂಬಿ ಹೋಗಿದೆ. ಕಾಂಗ್ರೆಸ್  ಪಕ್ಷಕ್ಕೆ ರಾಜ್ಯದ ಜನರು ಮುಂದಿನದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಬಲಿಷ್ಠವಾದ ಆರ್ಥಿಕತೆಯ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು. ಸ್ಥಳೀಯವಾಗಿ ಬಿಜೆಪಿ ಪಕ್ಷದ  ಶಾಸಕರಿದ್ದು, ಲೋಕಸಭಾ ಕ್ಷೇತ್ರದಲ್ಲಿ ಸಹ ಬಿಜೆಪಿಯ ಸಂಸದರು ಇದ್ದಾರೆ. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಕಾರ್ಯಕರ್ಯರು ಅತ್ಯಂತ ಚುರುಕಿನಿಂದ ಕಾರ್ಯನಿರ್ವಹಿಸಿ ಬಿಜೆಪಿ ಪಕ್ಷದ ಸದಸ್ಯತ್ವದ ಪ್ರಮಾಣವನ್ನು ಹೆಚ್ಚಿನ ರೀತಿಯಲ್ಲಿ ಮಾಡಬೇಕು. ಬಿಜೆಪಿ ಪಕ್ಷಕ್ಕೆ ದೇಶವೇ ಮೊದಲು. ಈ ನಿಟ್ಟಿನಲ್ಲಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಸದಸ್ಯರ ಸಂಖ್ಯೆ ಅಧಿಕವಾಗುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಕುಟುಂಬ ಮೊದಲು ಎಂದು ವ್ಯಂಗ್ಯವಾಡಿದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ, ಇಂದು ಹೈಕೋರ್ಟ್ ನೀಡಿದ ಆದೇಶವು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೇಯಂದ್ರ ಅವರ ನೇತೃತ್ವದಲ್ಲಿ ನಡೆದ ಪಾದಯಾತ್ರಗೆ  ಸಂದ ಜಯ. ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಕ್ಷಣಗಣನೆ. ಅತೀ ಜರೂರಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ‌ ಕೇವಲ ಸಿದ್ದರಾಮಯ್ಯನವರಾಗಿ ತನಿಖೆ ಎದುರಿಸಲಿ ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಗಳು ನಾವು ಸ್ವಚ್ಚವಾಗಿದ್ದೇವೆ ಎಂದು ದಿನನಿತ್ಯ ಹೇಳಿಕೆ ನೀಡುತ್ತಿದ್ದಾರೆ. ಆ ರೀತಿ ಇದ್ದರೆ ಮೊದಲು ನಿರ್ದೋಷಿ ಆಗಿ ಹೊರ ಬರಲಿ ತದನಂತರ ರಾಜಕಾರಣ ಮಾಡಲಿ. ಕಳಂಕಿತರು ಯಾರೇ ಇದ್ದರೂ ಮೊದಲು ರಾಜೀನಾಮೆ ನೀಡಲಿ. ಮುಖ್ಯಮಂತ್ರಿಗಳು ತಮ್ಮ ಗೌರವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಕ್ಷಣ ರಾಜೀನಾಮೆ ನೀಡಲಿ. ಗೌರವಯುತವಾಗಿ ರಾಜೀನಾಮೆ ಕೊಟ್ಟರೆ ಉತ್ತಮ, ಇಲ್ಲವಾದಲ್ಲಿ ನಮ್ಮ‌ ಹೋರಾಟ ಮುಂದುವರಿಯುತ್ತೆ ಎಂದರು

ನಿನ್ನೆ ನಡೆದ ನಗರಸಭಾ ಚುನಾವಣೆ ಬಿಜೆಪಿಯ ಪಾಲಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಪಕ್ಷವನ್ನು ಸಂಘಟಿಸಲು ಸಹ ಉತ್ತಮವಾದ ವಾತವರಣವಿದೆ ಎಂದು ಕಾರ್ಯಯರ್ತರಿಗೆ ಕರೆ ನೀಡಿದರು.

ರಾಜ್ಯದಲ್ಲಿ ಈಗಾಗಲೇ ಸುಮಾರು25-30ಲಕ್ಷಕ್ಕೂ‌ ಹೆಚ್ಚು ಸದಸ್ಯತ್ವ ನೋಂದಣಿ ಆಗಿದೆ. ಕನಿಷ್ಠ 2 ಕೋಟಿ ಸದಸ್ಯತ್ವ ನೋಂದಣಿ ಮಾಡುವ ಪಣ ತೊಟ್ಟಿದ್ದೇವೆ ಎಂದರು.

ಈ ವೇಳೆ  ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ನಗರ ಸಭಾ ಸದಸ್ಯರಾದ ಪದ್ಮನಾಭ್, ಭಾಸ್ಕರ್, ಮುಖಂಡರಾದ ವತ್ಸಲಾ, ಮುದ್ದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

59 minutes ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

8 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

9 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

22 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

22 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

22 hours ago