ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಶಾಸಕ ಧೀರಾಜ್ ಮುನಿರಾಜ್ ಒತ್ತಾಯ

ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠ  ವಜಾಗೊಳಿಸಿದೆ. ಈ ಸಂಬಂಧ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಲಾಗಿದೆ ಎಂದು ಆಂಧ್ರಪ್ರದೇಶದ ಎಂಎಲ್ಸಿ  ಪೊಂಗುಲೆಟ್ಟಿ ಸುಧಾಕರ್ ರೆಡ್ಡಿ ಅವರು ಹೇಳಿದರು.

ನಗರದ ಮಾರುಕಟ್ಟೆ ಚೌಕದಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್ ನ ತೀರ್ಪು ಸ್ವಾಗತಾರ್ಹ. ಈಗಾಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ. ರಾಜ್ಯದಲ್ಲಿ ವಾಲ್ಮೀಕಿ ಹಗರಣ, ಮೂಡಹಗರಣ ಸೇರಿದಂತೆ ಹಗರಣಗಳಲ್ಲೇ ಸರ್ಕಾರ ತುಂಬಿ ಹೋಗಿದೆ. ಕಾಂಗ್ರೆಸ್  ಪಕ್ಷಕ್ಕೆ ರಾಜ್ಯದ ಜನರು ಮುಂದಿನದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಬಲಿಷ್ಠವಾದ ಆರ್ಥಿಕತೆಯ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು. ಸ್ಥಳೀಯವಾಗಿ ಬಿಜೆಪಿ ಪಕ್ಷದ  ಶಾಸಕರಿದ್ದು, ಲೋಕಸಭಾ ಕ್ಷೇತ್ರದಲ್ಲಿ ಸಹ ಬಿಜೆಪಿಯ ಸಂಸದರು ಇದ್ದಾರೆ. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಕಾರ್ಯಕರ್ಯರು ಅತ್ಯಂತ ಚುರುಕಿನಿಂದ ಕಾರ್ಯನಿರ್ವಹಿಸಿ ಬಿಜೆಪಿ ಪಕ್ಷದ ಸದಸ್ಯತ್ವದ ಪ್ರಮಾಣವನ್ನು ಹೆಚ್ಚಿನ ರೀತಿಯಲ್ಲಿ ಮಾಡಬೇಕು. ಬಿಜೆಪಿ ಪಕ್ಷಕ್ಕೆ ದೇಶವೇ ಮೊದಲು. ಈ ನಿಟ್ಟಿನಲ್ಲಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಸದಸ್ಯರ ಸಂಖ್ಯೆ ಅಧಿಕವಾಗುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಕುಟುಂಬ ಮೊದಲು ಎಂದು ವ್ಯಂಗ್ಯವಾಡಿದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ, ಇಂದು ಹೈಕೋರ್ಟ್ ನೀಡಿದ ಆದೇಶವು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೇಯಂದ್ರ ಅವರ ನೇತೃತ್ವದಲ್ಲಿ ನಡೆದ ಪಾದಯಾತ್ರಗೆ  ಸಂದ ಜಯ. ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಕ್ಷಣಗಣನೆ. ಅತೀ ಜರೂರಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ‌ ಕೇವಲ ಸಿದ್ದರಾಮಯ್ಯನವರಾಗಿ ತನಿಖೆ ಎದುರಿಸಲಿ ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಗಳು ನಾವು ಸ್ವಚ್ಚವಾಗಿದ್ದೇವೆ ಎಂದು ದಿನನಿತ್ಯ ಹೇಳಿಕೆ ನೀಡುತ್ತಿದ್ದಾರೆ. ಆ ರೀತಿ ಇದ್ದರೆ ಮೊದಲು ನಿರ್ದೋಷಿ ಆಗಿ ಹೊರ ಬರಲಿ ತದನಂತರ ರಾಜಕಾರಣ ಮಾಡಲಿ. ಕಳಂಕಿತರು ಯಾರೇ ಇದ್ದರೂ ಮೊದಲು ರಾಜೀನಾಮೆ ನೀಡಲಿ. ಮುಖ್ಯಮಂತ್ರಿಗಳು ತಮ್ಮ ಗೌರವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಕ್ಷಣ ರಾಜೀನಾಮೆ ನೀಡಲಿ. ಗೌರವಯುತವಾಗಿ ರಾಜೀನಾಮೆ ಕೊಟ್ಟರೆ ಉತ್ತಮ, ಇಲ್ಲವಾದಲ್ಲಿ ನಮ್ಮ‌ ಹೋರಾಟ ಮುಂದುವರಿಯುತ್ತೆ ಎಂದರು

ನಿನ್ನೆ ನಡೆದ ನಗರಸಭಾ ಚುನಾವಣೆ ಬಿಜೆಪಿಯ ಪಾಲಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಪಕ್ಷವನ್ನು ಸಂಘಟಿಸಲು ಸಹ ಉತ್ತಮವಾದ ವಾತವರಣವಿದೆ ಎಂದು ಕಾರ್ಯಯರ್ತರಿಗೆ ಕರೆ ನೀಡಿದರು.

ರಾಜ್ಯದಲ್ಲಿ ಈಗಾಗಲೇ ಸುಮಾರು25-30ಲಕ್ಷಕ್ಕೂ‌ ಹೆಚ್ಚು ಸದಸ್ಯತ್ವ ನೋಂದಣಿ ಆಗಿದೆ. ಕನಿಷ್ಠ 2 ಕೋಟಿ ಸದಸ್ಯತ್ವ ನೋಂದಣಿ ಮಾಡುವ ಪಣ ತೊಟ್ಟಿದ್ದೇವೆ ಎಂದರು.

ಈ ವೇಳೆ  ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ನಗರ ಸಭಾ ಸದಸ್ಯರಾದ ಪದ್ಮನಾಭ್, ಭಾಸ್ಕರ್, ಮುಖಂಡರಾದ ವತ್ಸಲಾ, ಮುದ್ದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

14 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

23 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago