ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಶಾಸಕ ಧೀರಾಜ್ ಮುನಿರಾಜ್ ಒತ್ತಾಯ

ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠ  ವಜಾಗೊಳಿಸಿದೆ. ಈ ಸಂಬಂಧ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಲಾಗಿದೆ ಎಂದು ಆಂಧ್ರಪ್ರದೇಶದ ಎಂಎಲ್ಸಿ  ಪೊಂಗುಲೆಟ್ಟಿ ಸುಧಾಕರ್ ರೆಡ್ಡಿ ಅವರು ಹೇಳಿದರು.

ನಗರದ ಮಾರುಕಟ್ಟೆ ಚೌಕದಲ್ಲಿ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್ ನ ತೀರ್ಪು ಸ್ವಾಗತಾರ್ಹ. ಈಗಾಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ. ರಾಜ್ಯದಲ್ಲಿ ವಾಲ್ಮೀಕಿ ಹಗರಣ, ಮೂಡಹಗರಣ ಸೇರಿದಂತೆ ಹಗರಣಗಳಲ್ಲೇ ಸರ್ಕಾರ ತುಂಬಿ ಹೋಗಿದೆ. ಕಾಂಗ್ರೆಸ್  ಪಕ್ಷಕ್ಕೆ ರಾಜ್ಯದ ಜನರು ಮುಂದಿನದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಬಲಿಷ್ಠವಾದ ಆರ್ಥಿಕತೆಯ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು. ಸ್ಥಳೀಯವಾಗಿ ಬಿಜೆಪಿ ಪಕ್ಷದ  ಶಾಸಕರಿದ್ದು, ಲೋಕಸಭಾ ಕ್ಷೇತ್ರದಲ್ಲಿ ಸಹ ಬಿಜೆಪಿಯ ಸಂಸದರು ಇದ್ದಾರೆ. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಕಾರ್ಯಕರ್ಯರು ಅತ್ಯಂತ ಚುರುಕಿನಿಂದ ಕಾರ್ಯನಿರ್ವಹಿಸಿ ಬಿಜೆಪಿ ಪಕ್ಷದ ಸದಸ್ಯತ್ವದ ಪ್ರಮಾಣವನ್ನು ಹೆಚ್ಚಿನ ರೀತಿಯಲ್ಲಿ ಮಾಡಬೇಕು. ಬಿಜೆಪಿ ಪಕ್ಷಕ್ಕೆ ದೇಶವೇ ಮೊದಲು. ಈ ನಿಟ್ಟಿನಲ್ಲಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಸದಸ್ಯರ ಸಂಖ್ಯೆ ಅಧಿಕವಾಗುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಕುಟುಂಬ ಮೊದಲು ಎಂದು ವ್ಯಂಗ್ಯವಾಡಿದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ, ಇಂದು ಹೈಕೋರ್ಟ್ ನೀಡಿದ ಆದೇಶವು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೇಯಂದ್ರ ಅವರ ನೇತೃತ್ವದಲ್ಲಿ ನಡೆದ ಪಾದಯಾತ್ರಗೆ  ಸಂದ ಜಯ. ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಕ್ಷಣಗಣನೆ. ಅತೀ ಜರೂರಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ‌ ಕೇವಲ ಸಿದ್ದರಾಮಯ್ಯನವರಾಗಿ ತನಿಖೆ ಎದುರಿಸಲಿ ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಗಳು ನಾವು ಸ್ವಚ್ಚವಾಗಿದ್ದೇವೆ ಎಂದು ದಿನನಿತ್ಯ ಹೇಳಿಕೆ ನೀಡುತ್ತಿದ್ದಾರೆ. ಆ ರೀತಿ ಇದ್ದರೆ ಮೊದಲು ನಿರ್ದೋಷಿ ಆಗಿ ಹೊರ ಬರಲಿ ತದನಂತರ ರಾಜಕಾರಣ ಮಾಡಲಿ. ಕಳಂಕಿತರು ಯಾರೇ ಇದ್ದರೂ ಮೊದಲು ರಾಜೀನಾಮೆ ನೀಡಲಿ. ಮುಖ್ಯಮಂತ್ರಿಗಳು ತಮ್ಮ ಗೌರವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಕ್ಷಣ ರಾಜೀನಾಮೆ ನೀಡಲಿ. ಗೌರವಯುತವಾಗಿ ರಾಜೀನಾಮೆ ಕೊಟ್ಟರೆ ಉತ್ತಮ, ಇಲ್ಲವಾದಲ್ಲಿ ನಮ್ಮ‌ ಹೋರಾಟ ಮುಂದುವರಿಯುತ್ತೆ ಎಂದರು

ನಿನ್ನೆ ನಡೆದ ನಗರಸಭಾ ಚುನಾವಣೆ ಬಿಜೆಪಿಯ ಪಾಲಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಪಕ್ಷವನ್ನು ಸಂಘಟಿಸಲು ಸಹ ಉತ್ತಮವಾದ ವಾತವರಣವಿದೆ ಎಂದು ಕಾರ್ಯಯರ್ತರಿಗೆ ಕರೆ ನೀಡಿದರು.

ರಾಜ್ಯದಲ್ಲಿ ಈಗಾಗಲೇ ಸುಮಾರು25-30ಲಕ್ಷಕ್ಕೂ‌ ಹೆಚ್ಚು ಸದಸ್ಯತ್ವ ನೋಂದಣಿ ಆಗಿದೆ. ಕನಿಷ್ಠ 2 ಕೋಟಿ ಸದಸ್ಯತ್ವ ನೋಂದಣಿ ಮಾಡುವ ಪಣ ತೊಟ್ಟಿದ್ದೇವೆ ಎಂದರು.

ಈ ವೇಳೆ  ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ನಗರ ಸಭಾ ಸದಸ್ಯರಾದ ಪದ್ಮನಾಭ್, ಭಾಸ್ಕರ್, ಮುಖಂಡರಾದ ವತ್ಸಲಾ, ಮುದ್ದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago