Categories: ಕೋಲಾರ

ಸಿಎಸ್ಆರ್ ಅನುದಾನ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತಾಗಬೇಕು- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಗ್ರಾಮಾಂತರ ‌ಪ್ರದೇಶ ಬಡ ವಿದ್ಯಾರ್ಥಿಗಳು ಶುಲ್ಕ‌ ಪಾವತಿಸಲು ಸಾಧ್ಯವಾಗದೆ ಕಾಲೇಜು ಶಿಕ್ಷಣದಿಂದ ವಂಚಿತರಾಗುತ್ತಿದ್ದು ಮಲಬಾರ್‌ ಅಂತಹ ಕಂಪನಿಯು ತನ್ನ ಸಿಎಸ್ಆರ್ ಅನುದಾನವನ್ನು ವಿದ್ಯಾರ್ಥಿವೇತನದ ಮೂಲಕ ಅನುಕೂಲ‌ ಮಾಡಿಕೊಟ್ಟಿದ್ದಾರೆ ಇದರ ಸದುಪಯೋಗ ಪಡಿಸಿಕೊಂಡು ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಭಾನುವಾರ ಮಲಬಾರ್ ಸಂಸ್ಥೆಯ ವತಿಯಿಂದ ಸಿಎಸ್ಆರ್ ಅನುದಾನದಡಿ ಸುಮಾರು ಜಿಲ್ಲೆಯ 721 ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ 61.66 ಲಕ್ಷ ರೂಗಳ ವಿದ್ಯಾರ್ಥಿವೇತನವನ್ನು ವಿತರಿಸಿ ಮಾತನಾಡಿದ ಅವರು ಸಮಾಜದಲ್ಲಿ ಬದಲಾವಣೆ ಶಿಕ್ಷಣದಿಂದ ಮಾತ್ರವೇ ಸಾಧ್ಯವಾಗುತ್ತದೆ ಕೇವಲ ಆಸ್ತಿ ಮಾಡಿದರೆ ಸಾಲದು ಇಂತಹ ಸಮಾಜಮುಖಿ ಕಾರ್ಯಗಳನ್ನು ನಿರ್ವಹಿಸಬೇಕು ಮಲಬಾರ್ ಸಂಸ್ಥೆಯ ಸಹಾಯಹಸ್ತವು ಶಿಕ್ಷಣಕ್ಕೆ ಹೆಚ್ಚಿನ ಅಧ್ಯತೆ ಇರಲಿ ನಿಮ್ಮ ಜೊತೆಗೆ ಸದಾ ನಾವು ಎಲ್ಲರೂ ಇರತ್ತೇವೆ ಎಂದರು.

ಜಿಲ್ಲೆಯ ಕೋಲಾರ, ಬಂಗಾರಪೇಟೆ, ‌ಮಾಲೂರು, ಮಾಸ್ತಿ, ಮುಳಬಾಗಿಲು ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿಯರಿಗೆ ‌ ಒಟ್ಟು 16 ಲಕ್ಷ 66 ಸಾವಿರ ವಿದ್ಯಾರ್ಥಿವೇತನ ನೀಡಿದ್ದಾರೆ. ಇದೊಂದು ಒಳ್ಳೆಯ ಕೆಲಸವಾಗಿದೆ ವಿದ್ಯಾರ್ಥಿಗಳು ಸಮಾಜದ ಆಸ್ತಿ ಏನೂ ಇಲ್ಲದ ‌ಸಮಯದಲ್ಲಿ ಅಂಬೇಡ್ಕರ್ 54 ಪದವಿ ಮಾಡಿದ್ದರು. ಈಗ ಎಲ್ಲಾ ಸೌಲಭ್ಯ ಇರುವ ನೀವು ಕನಿಷ್ಠ 10 ಡಿಗ್ರಿಯಾದರೂ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಎಲ್ಲವನ್ನೂ ಸರ್ಕಾರದಿಂದ ನಿರೀಕ್ಷಿಸಲು ಆಗುವುದಿಲ್ಲ ಖಾಸಗಿ ಕಂಪನಿಗಳ ಲಾಭಾಂಶವನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ ಹೆಣ್ಣು ಮಕ್ಕಳು ಸಹ ಎಲ್ಲಾ ವಿಭಾಗದಲ್ಲಿ ನಿಭಾಯಿಸುವ ಶಕ್ತಿ ಮತ್ತು ಅವಕಾಶಗಳು ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಜೊತೆಗೆ ಸರ್ಕಾರವು ರಾಜಕೀಯದಲ್ಲಿ ಸಹ ಮಹಿಳಾ ಮೀಸಲಾತಿ ಜಾರಿ ಮಾಡಿದ್ದು ಮುಂದೆ ಜಾರಿಯಾಗಲಿದೆ ಗುರಿ ಮತ್ತು ಯಶಸ್ಸು ನಿಮ್ಮ ಅಧ್ಯತೆಯಾಗಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಮಲಬಾರ್ ಜೋನಲ್ ಮುಖ್ಯಸ್ಥ ಶರಿಪುದ್ದೀನ್ ಮಹಿಳಾ ಸಬಲೀಕರಣ‌ ಉದ್ದೇಶದಿಂದ ಸರ್ಕಾರಿ‌ ಕಾಲೇಜು ‌ಮಕ್ಕಳ ಉನ್ನತ ‌ಶಿಕ್ಷಣಕ್ಕೆ ವಿದ್ಯಾರ್ಥಿವೇತನ ನೀಡುತ್ತಿದ್ದೇವೆ. ದೇಶದ 21 ಸಾವಿರ ಮಕ್ಕಳಿಗೆ ‌ರಾಜ್ಯದ 5.501 ಮಕ್ಕಳಿಗೆ ಸೌಲಭ್ಯಗಳನ್ನು ನೀಡಲಾಗಿದೆ. ಕೋಲಾರ ಜಿಲ್ಲೆಯ 25 ಕಾಲೇಜುಗಳ 724 ಮಕ್ಕಳಿಗೆ 16 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ನೀಡಿದ್ದೇವೆ. ಆದಾಯದ ಶೇ 5ರಷ್ಟು ಹಣ ಸಿ‌ಎಸ್ಆರ್ ಅನುದಾನದಲ್ಲಿ ನೀಡಲಾಗಿದೆ ಸಂಸ್ಥೆಯು ಶಿಕ್ಷಣ ಜೊತೆಗೆ ಹಸಿವು ಮುಕ್ತ ಭಾರತ, ಅಜ್ಜಿಮನೆ, ಮಾನವೀಯ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು,

ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರಿ ಉಪ ನಿರ್ದೇಶಕ ಬಾಲಕೃಷ್ಣ, ಬಂಗಾರಪೇಟೆ ಪಿಯು ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ, ಮಲಬಾರ್ ಸಂಸ್ಥೆಯ ಅಲ್ತಾಫ್,‌ ಸಾಧಿಕ್ ಮುಂತಾದವರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

6 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago