ಕೋಲಾರ: ಗ್ರಾಮಾಂತರ ಪ್ರದೇಶ ಬಡ ವಿದ್ಯಾರ್ಥಿಗಳು ಶುಲ್ಕ ಪಾವತಿಸಲು ಸಾಧ್ಯವಾಗದೆ ಕಾಲೇಜು ಶಿಕ್ಷಣದಿಂದ ವಂಚಿತರಾಗುತ್ತಿದ್ದು ಮಲಬಾರ್ ಅಂತಹ ಕಂಪನಿಯು ತನ್ನ ಸಿಎಸ್ಆರ್ ಅನುದಾನವನ್ನು ವಿದ್ಯಾರ್ಥಿವೇತನದ ಮೂಲಕ ಅನುಕೂಲ ಮಾಡಿಕೊಟ್ಟಿದ್ದಾರೆ ಇದರ ಸದುಪಯೋಗ ಪಡಿಸಿಕೊಂಡು ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಭಾನುವಾರ ಮಲಬಾರ್ ಸಂಸ್ಥೆಯ ವತಿಯಿಂದ ಸಿಎಸ್ಆರ್ ಅನುದಾನದಡಿ ಸುಮಾರು ಜಿಲ್ಲೆಯ 721 ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ 61.66 ಲಕ್ಷ ರೂಗಳ ವಿದ್ಯಾರ್ಥಿವೇತನವನ್ನು ವಿತರಿಸಿ ಮಾತನಾಡಿದ ಅವರು ಸಮಾಜದಲ್ಲಿ ಬದಲಾವಣೆ ಶಿಕ್ಷಣದಿಂದ ಮಾತ್ರವೇ ಸಾಧ್ಯವಾಗುತ್ತದೆ ಕೇವಲ ಆಸ್ತಿ ಮಾಡಿದರೆ ಸಾಲದು ಇಂತಹ ಸಮಾಜಮುಖಿ ಕಾರ್ಯಗಳನ್ನು ನಿರ್ವಹಿಸಬೇಕು ಮಲಬಾರ್ ಸಂಸ್ಥೆಯ ಸಹಾಯಹಸ್ತವು ಶಿಕ್ಷಣಕ್ಕೆ ಹೆಚ್ಚಿನ ಅಧ್ಯತೆ ಇರಲಿ ನಿಮ್ಮ ಜೊತೆಗೆ ಸದಾ ನಾವು ಎಲ್ಲರೂ ಇರತ್ತೇವೆ ಎಂದರು.
ಜಿಲ್ಲೆಯ ಕೋಲಾರ, ಬಂಗಾರಪೇಟೆ, ಮಾಲೂರು, ಮಾಸ್ತಿ, ಮುಳಬಾಗಿಲು ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿಯರಿಗೆ ಒಟ್ಟು 16 ಲಕ್ಷ 66 ಸಾವಿರ ವಿದ್ಯಾರ್ಥಿವೇತನ ನೀಡಿದ್ದಾರೆ. ಇದೊಂದು ಒಳ್ಳೆಯ ಕೆಲಸವಾಗಿದೆ ವಿದ್ಯಾರ್ಥಿಗಳು ಸಮಾಜದ ಆಸ್ತಿ ಏನೂ ಇಲ್ಲದ ಸಮಯದಲ್ಲಿ ಅಂಬೇಡ್ಕರ್ 54 ಪದವಿ ಮಾಡಿದ್ದರು. ಈಗ ಎಲ್ಲಾ ಸೌಲಭ್ಯ ಇರುವ ನೀವು ಕನಿಷ್ಠ 10 ಡಿಗ್ರಿಯಾದರೂ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಎಲ್ಲವನ್ನೂ ಸರ್ಕಾರದಿಂದ ನಿರೀಕ್ಷಿಸಲು ಆಗುವುದಿಲ್ಲ ಖಾಸಗಿ ಕಂಪನಿಗಳ ಲಾಭಾಂಶವನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ ಹೆಣ್ಣು ಮಕ್ಕಳು ಸಹ ಎಲ್ಲಾ ವಿಭಾಗದಲ್ಲಿ ನಿಭಾಯಿಸುವ ಶಕ್ತಿ ಮತ್ತು ಅವಕಾಶಗಳು ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಜೊತೆಗೆ ಸರ್ಕಾರವು ರಾಜಕೀಯದಲ್ಲಿ ಸಹ ಮಹಿಳಾ ಮೀಸಲಾತಿ ಜಾರಿ ಮಾಡಿದ್ದು ಮುಂದೆ ಜಾರಿಯಾಗಲಿದೆ ಗುರಿ ಮತ್ತು ಯಶಸ್ಸು ನಿಮ್ಮ ಅಧ್ಯತೆಯಾಗಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಮಲಬಾರ್ ಜೋನಲ್ ಮುಖ್ಯಸ್ಥ ಶರಿಪುದ್ದೀನ್ ಮಹಿಳಾ ಸಬಲೀಕರಣ ಉದ್ದೇಶದಿಂದ ಸರ್ಕಾರಿ ಕಾಲೇಜು ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿವೇತನ ನೀಡುತ್ತಿದ್ದೇವೆ. ದೇಶದ 21 ಸಾವಿರ ಮಕ್ಕಳಿಗೆ ರಾಜ್ಯದ 5.501 ಮಕ್ಕಳಿಗೆ ಸೌಲಭ್ಯಗಳನ್ನು ನೀಡಲಾಗಿದೆ. ಕೋಲಾರ ಜಿಲ್ಲೆಯ 25 ಕಾಲೇಜುಗಳ 724 ಮಕ್ಕಳಿಗೆ 16 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ನೀಡಿದ್ದೇವೆ. ಆದಾಯದ ಶೇ 5ರಷ್ಟು ಹಣ ಸಿಎಸ್ಆರ್ ಅನುದಾನದಲ್ಲಿ ನೀಡಲಾಗಿದೆ ಸಂಸ್ಥೆಯು ಶಿಕ್ಷಣ ಜೊತೆಗೆ ಹಸಿವು ಮುಕ್ತ ಭಾರತ, ಅಜ್ಜಿಮನೆ, ಮಾನವೀಯ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು,
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರಿ ಉಪ ನಿರ್ದೇಶಕ ಬಾಲಕೃಷ್ಣ, ಬಂಗಾರಪೇಟೆ ಪಿಯು ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ, ಮಲಬಾರ್ ಸಂಸ್ಥೆಯ ಅಲ್ತಾಫ್, ಸಾಧಿಕ್ ಮುಂತಾದವರು ಇದ್ದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…