Categories: ಕೋಲಾರ

ಸಿಎಸ್ಆರ್ ಅನುದಾನ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತಾಗಬೇಕು- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಗ್ರಾಮಾಂತರ ‌ಪ್ರದೇಶ ಬಡ ವಿದ್ಯಾರ್ಥಿಗಳು ಶುಲ್ಕ‌ ಪಾವತಿಸಲು ಸಾಧ್ಯವಾಗದೆ ಕಾಲೇಜು ಶಿಕ್ಷಣದಿಂದ ವಂಚಿತರಾಗುತ್ತಿದ್ದು ಮಲಬಾರ್‌ ಅಂತಹ ಕಂಪನಿಯು ತನ್ನ ಸಿಎಸ್ಆರ್ ಅನುದಾನವನ್ನು ವಿದ್ಯಾರ್ಥಿವೇತನದ ಮೂಲಕ ಅನುಕೂಲ‌ ಮಾಡಿಕೊಟ್ಟಿದ್ದಾರೆ ಇದರ ಸದುಪಯೋಗ ಪಡಿಸಿಕೊಂಡು ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಭಾನುವಾರ ಮಲಬಾರ್ ಸಂಸ್ಥೆಯ ವತಿಯಿಂದ ಸಿಎಸ್ಆರ್ ಅನುದಾನದಡಿ ಸುಮಾರು ಜಿಲ್ಲೆಯ 721 ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ 61.66 ಲಕ್ಷ ರೂಗಳ ವಿದ್ಯಾರ್ಥಿವೇತನವನ್ನು ವಿತರಿಸಿ ಮಾತನಾಡಿದ ಅವರು ಸಮಾಜದಲ್ಲಿ ಬದಲಾವಣೆ ಶಿಕ್ಷಣದಿಂದ ಮಾತ್ರವೇ ಸಾಧ್ಯವಾಗುತ್ತದೆ ಕೇವಲ ಆಸ್ತಿ ಮಾಡಿದರೆ ಸಾಲದು ಇಂತಹ ಸಮಾಜಮುಖಿ ಕಾರ್ಯಗಳನ್ನು ನಿರ್ವಹಿಸಬೇಕು ಮಲಬಾರ್ ಸಂಸ್ಥೆಯ ಸಹಾಯಹಸ್ತವು ಶಿಕ್ಷಣಕ್ಕೆ ಹೆಚ್ಚಿನ ಅಧ್ಯತೆ ಇರಲಿ ನಿಮ್ಮ ಜೊತೆಗೆ ಸದಾ ನಾವು ಎಲ್ಲರೂ ಇರತ್ತೇವೆ ಎಂದರು.

ಜಿಲ್ಲೆಯ ಕೋಲಾರ, ಬಂಗಾರಪೇಟೆ, ‌ಮಾಲೂರು, ಮಾಸ್ತಿ, ಮುಳಬಾಗಿಲು ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿಯರಿಗೆ ‌ ಒಟ್ಟು 16 ಲಕ್ಷ 66 ಸಾವಿರ ವಿದ್ಯಾರ್ಥಿವೇತನ ನೀಡಿದ್ದಾರೆ. ಇದೊಂದು ಒಳ್ಳೆಯ ಕೆಲಸವಾಗಿದೆ ವಿದ್ಯಾರ್ಥಿಗಳು ಸಮಾಜದ ಆಸ್ತಿ ಏನೂ ಇಲ್ಲದ ‌ಸಮಯದಲ್ಲಿ ಅಂಬೇಡ್ಕರ್ 54 ಪದವಿ ಮಾಡಿದ್ದರು. ಈಗ ಎಲ್ಲಾ ಸೌಲಭ್ಯ ಇರುವ ನೀವು ಕನಿಷ್ಠ 10 ಡಿಗ್ರಿಯಾದರೂ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಎಲ್ಲವನ್ನೂ ಸರ್ಕಾರದಿಂದ ನಿರೀಕ್ಷಿಸಲು ಆಗುವುದಿಲ್ಲ ಖಾಸಗಿ ಕಂಪನಿಗಳ ಲಾಭಾಂಶವನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ ಹೆಣ್ಣು ಮಕ್ಕಳು ಸಹ ಎಲ್ಲಾ ವಿಭಾಗದಲ್ಲಿ ನಿಭಾಯಿಸುವ ಶಕ್ತಿ ಮತ್ತು ಅವಕಾಶಗಳು ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಜೊತೆಗೆ ಸರ್ಕಾರವು ರಾಜಕೀಯದಲ್ಲಿ ಸಹ ಮಹಿಳಾ ಮೀಸಲಾತಿ ಜಾರಿ ಮಾಡಿದ್ದು ಮುಂದೆ ಜಾರಿಯಾಗಲಿದೆ ಗುರಿ ಮತ್ತು ಯಶಸ್ಸು ನಿಮ್ಮ ಅಧ್ಯತೆಯಾಗಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಮಲಬಾರ್ ಜೋನಲ್ ಮುಖ್ಯಸ್ಥ ಶರಿಪುದ್ದೀನ್ ಮಹಿಳಾ ಸಬಲೀಕರಣ‌ ಉದ್ದೇಶದಿಂದ ಸರ್ಕಾರಿ‌ ಕಾಲೇಜು ‌ಮಕ್ಕಳ ಉನ್ನತ ‌ಶಿಕ್ಷಣಕ್ಕೆ ವಿದ್ಯಾರ್ಥಿವೇತನ ನೀಡುತ್ತಿದ್ದೇವೆ. ದೇಶದ 21 ಸಾವಿರ ಮಕ್ಕಳಿಗೆ ‌ರಾಜ್ಯದ 5.501 ಮಕ್ಕಳಿಗೆ ಸೌಲಭ್ಯಗಳನ್ನು ನೀಡಲಾಗಿದೆ. ಕೋಲಾರ ಜಿಲ್ಲೆಯ 25 ಕಾಲೇಜುಗಳ 724 ಮಕ್ಕಳಿಗೆ 16 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ನೀಡಿದ್ದೇವೆ. ಆದಾಯದ ಶೇ 5ರಷ್ಟು ಹಣ ಸಿ‌ಎಸ್ಆರ್ ಅನುದಾನದಲ್ಲಿ ನೀಡಲಾಗಿದೆ ಸಂಸ್ಥೆಯು ಶಿಕ್ಷಣ ಜೊತೆಗೆ ಹಸಿವು ಮುಕ್ತ ಭಾರತ, ಅಜ್ಜಿಮನೆ, ಮಾನವೀಯ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು,

ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರಿ ಉಪ ನಿರ್ದೇಶಕ ಬಾಲಕೃಷ್ಣ, ಬಂಗಾರಪೇಟೆ ಪಿಯು ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ, ಮಲಬಾರ್ ಸಂಸ್ಥೆಯ ಅಲ್ತಾಫ್,‌ ಸಾಧಿಕ್ ಮುಂತಾದವರು ಇದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

6 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

11 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago