Categories: ಕೋಲಾರ

ಸಿಎಸ್ಆರ್ ಅನುದಾನ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತಾಗಬೇಕು- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಗ್ರಾಮಾಂತರ ‌ಪ್ರದೇಶ ಬಡ ವಿದ್ಯಾರ್ಥಿಗಳು ಶುಲ್ಕ‌ ಪಾವತಿಸಲು ಸಾಧ್ಯವಾಗದೆ ಕಾಲೇಜು ಶಿಕ್ಷಣದಿಂದ ವಂಚಿತರಾಗುತ್ತಿದ್ದು ಮಲಬಾರ್‌ ಅಂತಹ ಕಂಪನಿಯು ತನ್ನ ಸಿಎಸ್ಆರ್ ಅನುದಾನವನ್ನು ವಿದ್ಯಾರ್ಥಿವೇತನದ ಮೂಲಕ ಅನುಕೂಲ‌ ಮಾಡಿಕೊಟ್ಟಿದ್ದಾರೆ ಇದರ ಸದುಪಯೋಗ ಪಡಿಸಿಕೊಂಡು ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಭಾನುವಾರ ಮಲಬಾರ್ ಸಂಸ್ಥೆಯ ವತಿಯಿಂದ ಸಿಎಸ್ಆರ್ ಅನುದಾನದಡಿ ಸುಮಾರು ಜಿಲ್ಲೆಯ 721 ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ 61.66 ಲಕ್ಷ ರೂಗಳ ವಿದ್ಯಾರ್ಥಿವೇತನವನ್ನು ವಿತರಿಸಿ ಮಾತನಾಡಿದ ಅವರು ಸಮಾಜದಲ್ಲಿ ಬದಲಾವಣೆ ಶಿಕ್ಷಣದಿಂದ ಮಾತ್ರವೇ ಸಾಧ್ಯವಾಗುತ್ತದೆ ಕೇವಲ ಆಸ್ತಿ ಮಾಡಿದರೆ ಸಾಲದು ಇಂತಹ ಸಮಾಜಮುಖಿ ಕಾರ್ಯಗಳನ್ನು ನಿರ್ವಹಿಸಬೇಕು ಮಲಬಾರ್ ಸಂಸ್ಥೆಯ ಸಹಾಯಹಸ್ತವು ಶಿಕ್ಷಣಕ್ಕೆ ಹೆಚ್ಚಿನ ಅಧ್ಯತೆ ಇರಲಿ ನಿಮ್ಮ ಜೊತೆಗೆ ಸದಾ ನಾವು ಎಲ್ಲರೂ ಇರತ್ತೇವೆ ಎಂದರು.

ಜಿಲ್ಲೆಯ ಕೋಲಾರ, ಬಂಗಾರಪೇಟೆ, ‌ಮಾಲೂರು, ಮಾಸ್ತಿ, ಮುಳಬಾಗಿಲು ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿಯರಿಗೆ ‌ ಒಟ್ಟು 16 ಲಕ್ಷ 66 ಸಾವಿರ ವಿದ್ಯಾರ್ಥಿವೇತನ ನೀಡಿದ್ದಾರೆ. ಇದೊಂದು ಒಳ್ಳೆಯ ಕೆಲಸವಾಗಿದೆ ವಿದ್ಯಾರ್ಥಿಗಳು ಸಮಾಜದ ಆಸ್ತಿ ಏನೂ ಇಲ್ಲದ ‌ಸಮಯದಲ್ಲಿ ಅಂಬೇಡ್ಕರ್ 54 ಪದವಿ ಮಾಡಿದ್ದರು. ಈಗ ಎಲ್ಲಾ ಸೌಲಭ್ಯ ಇರುವ ನೀವು ಕನಿಷ್ಠ 10 ಡಿಗ್ರಿಯಾದರೂ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಎಲ್ಲವನ್ನೂ ಸರ್ಕಾರದಿಂದ ನಿರೀಕ್ಷಿಸಲು ಆಗುವುದಿಲ್ಲ ಖಾಸಗಿ ಕಂಪನಿಗಳ ಲಾಭಾಂಶವನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ ಹೆಣ್ಣು ಮಕ್ಕಳು ಸಹ ಎಲ್ಲಾ ವಿಭಾಗದಲ್ಲಿ ನಿಭಾಯಿಸುವ ಶಕ್ತಿ ಮತ್ತು ಅವಕಾಶಗಳು ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಜೊತೆಗೆ ಸರ್ಕಾರವು ರಾಜಕೀಯದಲ್ಲಿ ಸಹ ಮಹಿಳಾ ಮೀಸಲಾತಿ ಜಾರಿ ಮಾಡಿದ್ದು ಮುಂದೆ ಜಾರಿಯಾಗಲಿದೆ ಗುರಿ ಮತ್ತು ಯಶಸ್ಸು ನಿಮ್ಮ ಅಧ್ಯತೆಯಾಗಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಮಲಬಾರ್ ಜೋನಲ್ ಮುಖ್ಯಸ್ಥ ಶರಿಪುದ್ದೀನ್ ಮಹಿಳಾ ಸಬಲೀಕರಣ‌ ಉದ್ದೇಶದಿಂದ ಸರ್ಕಾರಿ‌ ಕಾಲೇಜು ‌ಮಕ್ಕಳ ಉನ್ನತ ‌ಶಿಕ್ಷಣಕ್ಕೆ ವಿದ್ಯಾರ್ಥಿವೇತನ ನೀಡುತ್ತಿದ್ದೇವೆ. ದೇಶದ 21 ಸಾವಿರ ಮಕ್ಕಳಿಗೆ ‌ರಾಜ್ಯದ 5.501 ಮಕ್ಕಳಿಗೆ ಸೌಲಭ್ಯಗಳನ್ನು ನೀಡಲಾಗಿದೆ. ಕೋಲಾರ ಜಿಲ್ಲೆಯ 25 ಕಾಲೇಜುಗಳ 724 ಮಕ್ಕಳಿಗೆ 16 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ನೀಡಿದ್ದೇವೆ. ಆದಾಯದ ಶೇ 5ರಷ್ಟು ಹಣ ಸಿ‌ಎಸ್ಆರ್ ಅನುದಾನದಲ್ಲಿ ನೀಡಲಾಗಿದೆ ಸಂಸ್ಥೆಯು ಶಿಕ್ಷಣ ಜೊತೆಗೆ ಹಸಿವು ಮುಕ್ತ ಭಾರತ, ಅಜ್ಜಿಮನೆ, ಮಾನವೀಯ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು,

ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರಿ ಉಪ ನಿರ್ದೇಶಕ ಬಾಲಕೃಷ್ಣ, ಬಂಗಾರಪೇಟೆ ಪಿಯು ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ, ಮಲಬಾರ್ ಸಂಸ್ಥೆಯ ಅಲ್ತಾಫ್,‌ ಸಾಧಿಕ್ ಮುಂತಾದವರು ಇದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

4 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

16 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

16 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

19 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

20 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago