Categories: ಕೋಲಾರ

ಸಿಎಸ್ಆರ್ ಅನುದಾನ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತಾಗಬೇಕು- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಗ್ರಾಮಾಂತರ ‌ಪ್ರದೇಶ ಬಡ ವಿದ್ಯಾರ್ಥಿಗಳು ಶುಲ್ಕ‌ ಪಾವತಿಸಲು ಸಾಧ್ಯವಾಗದೆ ಕಾಲೇಜು ಶಿಕ್ಷಣದಿಂದ ವಂಚಿತರಾಗುತ್ತಿದ್ದು ಮಲಬಾರ್‌ ಅಂತಹ ಕಂಪನಿಯು ತನ್ನ ಸಿಎಸ್ಆರ್ ಅನುದಾನವನ್ನು ವಿದ್ಯಾರ್ಥಿವೇತನದ ಮೂಲಕ ಅನುಕೂಲ‌ ಮಾಡಿಕೊಟ್ಟಿದ್ದಾರೆ ಇದರ ಸದುಪಯೋಗ ಪಡಿಸಿಕೊಂಡು ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಭಾನುವಾರ ಮಲಬಾರ್ ಸಂಸ್ಥೆಯ ವತಿಯಿಂದ ಸಿಎಸ್ಆರ್ ಅನುದಾನದಡಿ ಸುಮಾರು ಜಿಲ್ಲೆಯ 721 ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ 61.66 ಲಕ್ಷ ರೂಗಳ ವಿದ್ಯಾರ್ಥಿವೇತನವನ್ನು ವಿತರಿಸಿ ಮಾತನಾಡಿದ ಅವರು ಸಮಾಜದಲ್ಲಿ ಬದಲಾವಣೆ ಶಿಕ್ಷಣದಿಂದ ಮಾತ್ರವೇ ಸಾಧ್ಯವಾಗುತ್ತದೆ ಕೇವಲ ಆಸ್ತಿ ಮಾಡಿದರೆ ಸಾಲದು ಇಂತಹ ಸಮಾಜಮುಖಿ ಕಾರ್ಯಗಳನ್ನು ನಿರ್ವಹಿಸಬೇಕು ಮಲಬಾರ್ ಸಂಸ್ಥೆಯ ಸಹಾಯಹಸ್ತವು ಶಿಕ್ಷಣಕ್ಕೆ ಹೆಚ್ಚಿನ ಅಧ್ಯತೆ ಇರಲಿ ನಿಮ್ಮ ಜೊತೆಗೆ ಸದಾ ನಾವು ಎಲ್ಲರೂ ಇರತ್ತೇವೆ ಎಂದರು.

ಜಿಲ್ಲೆಯ ಕೋಲಾರ, ಬಂಗಾರಪೇಟೆ, ‌ಮಾಲೂರು, ಮಾಸ್ತಿ, ಮುಳಬಾಗಿಲು ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿಯರಿಗೆ ‌ ಒಟ್ಟು 16 ಲಕ್ಷ 66 ಸಾವಿರ ವಿದ್ಯಾರ್ಥಿವೇತನ ನೀಡಿದ್ದಾರೆ. ಇದೊಂದು ಒಳ್ಳೆಯ ಕೆಲಸವಾಗಿದೆ ವಿದ್ಯಾರ್ಥಿಗಳು ಸಮಾಜದ ಆಸ್ತಿ ಏನೂ ಇಲ್ಲದ ‌ಸಮಯದಲ್ಲಿ ಅಂಬೇಡ್ಕರ್ 54 ಪದವಿ ಮಾಡಿದ್ದರು. ಈಗ ಎಲ್ಲಾ ಸೌಲಭ್ಯ ಇರುವ ನೀವು ಕನಿಷ್ಠ 10 ಡಿಗ್ರಿಯಾದರೂ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಎಲ್ಲವನ್ನೂ ಸರ್ಕಾರದಿಂದ ನಿರೀಕ್ಷಿಸಲು ಆಗುವುದಿಲ್ಲ ಖಾಸಗಿ ಕಂಪನಿಗಳ ಲಾಭಾಂಶವನ್ನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ ಹೆಣ್ಣು ಮಕ್ಕಳು ಸಹ ಎಲ್ಲಾ ವಿಭಾಗದಲ್ಲಿ ನಿಭಾಯಿಸುವ ಶಕ್ತಿ ಮತ್ತು ಅವಕಾಶಗಳು ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಜೊತೆಗೆ ಸರ್ಕಾರವು ರಾಜಕೀಯದಲ್ಲಿ ಸಹ ಮಹಿಳಾ ಮೀಸಲಾತಿ ಜಾರಿ ಮಾಡಿದ್ದು ಮುಂದೆ ಜಾರಿಯಾಗಲಿದೆ ಗುರಿ ಮತ್ತು ಯಶಸ್ಸು ನಿಮ್ಮ ಅಧ್ಯತೆಯಾಗಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಮಲಬಾರ್ ಜೋನಲ್ ಮುಖ್ಯಸ್ಥ ಶರಿಪುದ್ದೀನ್ ಮಹಿಳಾ ಸಬಲೀಕರಣ‌ ಉದ್ದೇಶದಿಂದ ಸರ್ಕಾರಿ‌ ಕಾಲೇಜು ‌ಮಕ್ಕಳ ಉನ್ನತ ‌ಶಿಕ್ಷಣಕ್ಕೆ ವಿದ್ಯಾರ್ಥಿವೇತನ ನೀಡುತ್ತಿದ್ದೇವೆ. ದೇಶದ 21 ಸಾವಿರ ಮಕ್ಕಳಿಗೆ ‌ರಾಜ್ಯದ 5.501 ಮಕ್ಕಳಿಗೆ ಸೌಲಭ್ಯಗಳನ್ನು ನೀಡಲಾಗಿದೆ. ಕೋಲಾರ ಜಿಲ್ಲೆಯ 25 ಕಾಲೇಜುಗಳ 724 ಮಕ್ಕಳಿಗೆ 16 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ನೀಡಿದ್ದೇವೆ. ಆದಾಯದ ಶೇ 5ರಷ್ಟು ಹಣ ಸಿ‌ಎಸ್ಆರ್ ಅನುದಾನದಲ್ಲಿ ನೀಡಲಾಗಿದೆ ಸಂಸ್ಥೆಯು ಶಿಕ್ಷಣ ಜೊತೆಗೆ ಹಸಿವು ಮುಕ್ತ ಭಾರತ, ಅಜ್ಜಿಮನೆ, ಮಾನವೀಯ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು,

ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರಿ ಉಪ ನಿರ್ದೇಶಕ ಬಾಲಕೃಷ್ಣ, ಬಂಗಾರಪೇಟೆ ಪಿಯು ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ, ಮಲಬಾರ್ ಸಂಸ್ಥೆಯ ಅಲ್ತಾಫ್,‌ ಸಾಧಿಕ್ ಮುಂತಾದವರು ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

22 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago