ಮದುವೆಯಾಗಿ ಹಳ್ಳಿಯಲ್ಲಿ ನೆಲೆಸಿದ್ದೇನೆಂದು ಮನನೊಂದ ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಕಲಬುರಗಿ ನಗರದ ಆಜಾದಪುರ್ ಬಡಾವಣೆಯಲ್ಲಿ ನಡೆದಿದೆ.
ಅನಸೂಯಾ ಮೃತ ಯುವತಿಯಾಗಿದ್ದು, ಮನೆಯಲ್ಲಿಯೇ ನೇಣು ಬಿಗಿದು ಪ್ರಾಣ ಕಳೆದುಕೊಂಡಿದ್ದಾಳೆ.
ಮನೆ ಮಗಳ ಹುಚ್ಚು ನಿರ್ಧಾರಕ್ಕೆ ಕುಟುಂಬಸ್ಥರು ದಿಗ್ಭ್ರಾಂತರಾಗಿದ್ದಾರೆ.
ಅತ್ತೆ ಮಗ ಅವಿನಾಶ್ ಜೊತೆ ಸಪ್ತಪದಿ ತುಳಿದಿದ್ದ ಅನಸೂಯಾ, ಆರಂಭದಲ್ಲಿ ಚೆನ್ನಾಗಿಯೇ ಇದ್ದಳು. ಈಕೆಗೆ ಮೂವರು ಸಹೋದರಿಯರಿಗೂ ಕೂಡ ವಿವಾಹವಾಗಿದ್ದು, ಅವರೆಲ್ಲರೂ ನಗರದಲ್ಲಿ ನೆಲೆಸಿದ್ದರು. ಇದೇ ವಿಚಾರಕ್ಕೆ ದಿನ ಕಳೆದಂತೆ ಅನಸೂಯಾಗೆ ಬೇಸರ ಮೂಡಿದೆ. ತಾನು ಮಾತ್ರ ಮದುವೆಯಾಗಿ ಹಳ್ಳಿಯಲ್ಲಿ ಇದ್ದೇನೆ ಎಂದು ಮಾನಸಿಕವಾಗಿ ಮನನೊಂದಿದ್ದಾಳೆ… ಹೀಗಾಗಿ ಮಾನಸಿಕವಾಗಿ ನೊಂದಿದ್ದ ಈಕೆ, ತವರಿಗೆ ಹೋದಾಗಲೂ ವಿಚಾರವನ್ನು ಒಂದೆರಡುಬಾರಿ ಕುಟುಂಬಸ್ಥರಿಗೆ ಹೇಳಿದ್ದಳಂತೆ. ತಾನು ಉತ್ತಮ ವಿದ್ಯಾಭ್ಯಾಸ ಪಡೆದರೂ ಹಳ್ಳಿಯಲ್ಲಿ ಜೀವನ ನಡೆಸುತ್ತಿರುವ ಕೊರಗಿನ ಬಗ್ಗೆ ಅಲವತ್ತುಕೊಂಡಿದ್ದಳು.
ಈ ವೇಳೆ ಆಕೆಗೆ ಪೋಷಕರು ಬುದ್ಧಿಮಾತು ಕೂಡ ಹೇಳಿದ್ದರು. ಆದರೂ ಇದೇ ವಿಚಾರವಾಗಿ ಕೊರಗುತ್ತಿದ್ದ ಆಕೆ ಕೊನೆಗೂ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಇನ್ನು ಮದುವೆಗೂ ಮುನ್ನ ಅನಸೂಯಾ ಕೂಡ ಬೆಂಗಳೂರಿನಲ್ಲಿ ಒಂದು ವರ್ಷ ಕೆಲಸ ಮಾಡಿದ್ದಳು. ಹೀಗಾಗಿ ಆಕೆಗೆ ಹಳ್ಳಿ ಜೀವನ ಅಂದ್ರೆ ಅಷ್ಟಾಗಿ ಆಗಿ ಬರುತ್ತಿರಲಿಲ್ಲ. ಇತ್ತ ಪ್ರೀತಿಸಿದ ಹುಡುಗ ಬಿಡೋಕು ಆಗ್ತಿರಲಿಲ್ಲ. ಮದುವೆ ಬಳಿಕ ಸಿಟಿ ವ್ಯಾಮೋಹ ಈಕೆಯನ್ನು ವಿಪರೀತ ಕಾಡತೊಡಗಿದೆ. ಈ ನಡುವೆಯೂ ಕಲಬುರಗಿಯ ಆಜಾದಪುರದಲ್ಲಿರುವ ಗಂಡನ ಮನೆಯಲ್ಲಿ ಜೀವನ ಕಳೆಯುತ್ತಿದ್ದ ಈಕೆ, ನಿನ್ನೆ ಮಧ್ಯಾಹ್ನ ಗಂಡನ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…