ಸಿಡಿಲು ಬಡಿದು 16 ಕುರಿಗಳು ಬಲಿಯಾಗಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಅಕ್ಕಲೇಮಲ್ಲೇನಹಳ್ಳಿ ಬಳಿ ನಡೆದಿದೆ.
ತುಮಕೂರು ಜಿಲ್ಲೆಯ ಮಧುಗಿರಿ ಬಳಿಯ ರತ್ನಗಿರಿ ನಿವಾಸಿ ಕಿಟ್ಟಣ್ಣ ಎಂಬುವವರಿಗೆ ಸೇರಿದ ಕುರಿಗಳು ಸಿಡಿಲಿಗೆ ಬಲಿಯಾಗಿವೆ.
ಮರದ ಕೆಳಗಿ ನಿಂತಿದ್ದಾಗ ಸಿಡಿಲು ಬಡಿದಿದ್ದರಿಂದ ಕುರಿಗಳ ಮಾರಣಹೋಮ ನಡೆದಿದೆ.
ರತ್ನಗಿರಿಯಿಂದ 180 ಕುರಿಗಳೊಂದಿಗೆ ಕುರಿಗಳನ್ನು ಮೇಯಿಸಲು ಅಕ್ಕಲೇಮಲ್ಲೇನಹಳ್ಳಿಗೆ ಕುರಿಗಾಹಿಗಳು ಬಂದಿದ್ದರು.
ಸ್ವಲ್ಪ ಎಚ್ಚರ ತಪ್ಪಿದ್ದರೆ ಕುರಿಗಾಹಿಗಳು ಸಹ ಸಿಡಿಲಿಗೆ ಬಲಿಯಾಗುತ್ತಿದ್ದರು. ಅದೃಷ್ಟವಶಾತ್ ಕುರಿಗಾಹಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಕ್ಷಾಂತರ ರೂ. ಮೌಲ್ಯದ ಕುರಿಗಳನ್ನು ಕಳೆದುಕೊಂಡ ಕುರಿಗಾಹಿಗಳು ಕಂಗಾಲಾಗಿದ್ದಾರೆ.
ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…