ಸಿಡಿಲು ಬಡಿದು 16 ಕುರಿಗಳು ಬಲಿಯಾಗಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಅಕ್ಕಲೇಮಲ್ಲೇನಹಳ್ಳಿ ಬಳಿ ನಡೆದಿದೆ.
ತುಮಕೂರು ಜಿಲ್ಲೆಯ ಮಧುಗಿರಿ ಬಳಿಯ ರತ್ನಗಿರಿ ನಿವಾಸಿ ಕಿಟ್ಟಣ್ಣ ಎಂಬುವವರಿಗೆ ಸೇರಿದ ಕುರಿಗಳು ಸಿಡಿಲಿಗೆ ಬಲಿಯಾಗಿವೆ.
ಮರದ ಕೆಳಗಿ ನಿಂತಿದ್ದಾಗ ಸಿಡಿಲು ಬಡಿದಿದ್ದರಿಂದ ಕುರಿಗಳ ಮಾರಣಹೋಮ ನಡೆದಿದೆ.
ರತ್ನಗಿರಿಯಿಂದ 180 ಕುರಿಗಳೊಂದಿಗೆ ಕುರಿಗಳನ್ನು ಮೇಯಿಸಲು ಅಕ್ಕಲೇಮಲ್ಲೇನಹಳ್ಳಿಗೆ ಕುರಿಗಾಹಿಗಳು ಬಂದಿದ್ದರು.
ಸ್ವಲ್ಪ ಎಚ್ಚರ ತಪ್ಪಿದ್ದರೆ ಕುರಿಗಾಹಿಗಳು ಸಹ ಸಿಡಿಲಿಗೆ ಬಲಿಯಾಗುತ್ತಿದ್ದರು. ಅದೃಷ್ಟವಶಾತ್ ಕುರಿಗಾಹಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಕ್ಷಾಂತರ ರೂ. ಮೌಲ್ಯದ ಕುರಿಗಳನ್ನು ಕಳೆದುಕೊಂಡ ಕುರಿಗಾಹಿಗಳು ಕಂಗಾಲಾಗಿದ್ದಾರೆ.
ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…