ಸಿಡಿಲು ಬಡಿದು 16 ಕುರಿಗಳು ಬಲಿಯಾಗಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಅಕ್ಕಲೇಮಲ್ಲೇನಹಳ್ಳಿ ಬಳಿ ನಡೆದಿದೆ.
ತುಮಕೂರು ಜಿಲ್ಲೆಯ ಮಧುಗಿರಿ ಬಳಿಯ ರತ್ನಗಿರಿ ನಿವಾಸಿ ಕಿಟ್ಟಣ್ಣ ಎಂಬುವವರಿಗೆ ಸೇರಿದ ಕುರಿಗಳು ಸಿಡಿಲಿಗೆ ಬಲಿಯಾಗಿವೆ.
ಮರದ ಕೆಳಗಿ ನಿಂತಿದ್ದಾಗ ಸಿಡಿಲು ಬಡಿದಿದ್ದರಿಂದ ಕುರಿಗಳ ಮಾರಣಹೋಮ ನಡೆದಿದೆ.
ರತ್ನಗಿರಿಯಿಂದ 180 ಕುರಿಗಳೊಂದಿಗೆ ಕುರಿಗಳನ್ನು ಮೇಯಿಸಲು ಅಕ್ಕಲೇಮಲ್ಲೇನಹಳ್ಳಿಗೆ ಕುರಿಗಾಹಿಗಳು ಬಂದಿದ್ದರು.
ಸ್ವಲ್ಪ ಎಚ್ಚರ ತಪ್ಪಿದ್ದರೆ ಕುರಿಗಾಹಿಗಳು ಸಹ ಸಿಡಿಲಿಗೆ ಬಲಿಯಾಗುತ್ತಿದ್ದರು. ಅದೃಷ್ಟವಶಾತ್ ಕುರಿಗಾಹಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಕ್ಷಾಂತರ ರೂ. ಮೌಲ್ಯದ ಕುರಿಗಳನ್ನು ಕಳೆದುಕೊಂಡ ಕುರಿಗಾಹಿಗಳು ಕಂಗಾಲಾಗಿದ್ದಾರೆ.
ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…