ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಪಕ್ಷದ ಅಭ್ಯರ್ಥಿ ತಾಲೂಕಿನ ಕಲ್ಲಂಡೂರು ಗ್ರಾಮದ ಡಾ.ಕೆ ನಾಗರಾಜ್ ಅವರು ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮ ಪಟೇಲ್ ರವರ ನೇತೃತ್ವದಲ್ಲಿ ತುಮಕೂರು ಸಿದ್ದಗಂಗಾ ಮಠದ ಪೀಠಾಧಿಪತಿ ಶ್ರೀ ಡಾ. ಸಿದ್ದಲಿಂಗ ಸ್ವಾಮಿಗಳ ಆಶೀರ್ವಾದ ಪಡೆದರು.
ಆಶೀರ್ವಾದ ಮಾಡಿ ಮಾತನಾಡಿದ ಸ್ವಾಮಿಗಳು ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಮಹಿಮ ಪಟೇಲ್ ಅವರಂತಹ ನಾಯಕರ ಅವಶ್ಯಕತೆ ತುಂಬಾ ಇದೆ, ಇವರ ಸರ್ವೋದಯ ಸಿದ್ಧಾಂತ ಜನರಿಗೆ ಬಹುಬೇಗ ಮನಮುಟ್ಟಲಿ ಹಾಗೂ ಡಾ ನಾಗರಾಜ್ ರವರಿಗೆ ಜಯಸಿಗಲಿ ಎಂದು ಆಶೀರ್ವಾದ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್ ಗಂಗೂರ್, ಸುರೇಶ್ ತುಮಕೂರು, ರಂಗನಾಥ್ ಕೆ ಆರ್, ರಾಜ್ಯ ರೈತ ಘಟಕದ ಅಧ್ಯಕ್ಷ ಶ್ರೀನಿವಾಸಗೌಡ, ರಾಜ್ಯ ಮಹಿಳಾ ಸಂಚಾಲಕಿ ಕಲಾವತಿ, ಯಶೋದಾ ತುಮಕೂರು ಪ್ರಕಾಶ್ ಮಹಡಿಕ್, ಉಪಾಧ್ಯಕ್ಷೆ ಶಾಂತಕುಮಾರಿ, ಯುವ ಜನತಾದಳ ಉಪಾಧ್ಯಕ್ಷ ಪ್ರಭು, ಮೈನಾವತಿ, ದೀಪಕ್, ಕೋಲಾರದ ನಾರಾಯಣಸ್ವಾಮಿಗೌಡ , ಅಂಬರೀಷ್, ಚಿತ್ರದುರ್ಗದ ಸುನಿಲ್, ತುಮಕೂರಿನ ವಿಶ್ವನಾಥ್ ಗೌಡ ಡಾ.ಲೋಹಿತ್ ಗೌಡ, ದಾವಣಗೆರೆ ಜಿಲ್ಲಾಧ್ಯಕ್ಷ ನೀಲಗಿರಿಯಪ್ಪ, ಮಲ್ಲಿಕ್ ಮುಂತಾದವರು ಇದ್ದರು.
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…