Categories: ಕೋಲಾರ

ಸಿದ್ದಗಂಗಾ ಮಠದ ಶ್ರೀಗಳ ಆಶೀರ್ವಾದ ಪಡೆದ ಜೆಡಿಯು ಅಭ್ಯರ್ಥಿ ಡಾ.ನಾಗರಾಜ್

ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಪಕ್ಷದ ಅಭ್ಯರ್ಥಿ ತಾಲೂಕಿನ ಕಲ್ಲಂಡೂರು ಗ್ರಾಮದ ಡಾ.ಕೆ ನಾಗರಾಜ್ ಅವರು ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮ ಪಟೇಲ್ ರವರ ನೇತೃತ್ವದಲ್ಲಿ ತುಮಕೂರು ಸಿದ್ದಗಂಗಾ ಮಠದ ಪೀಠಾಧಿಪತಿ ಶ್ರೀ ಡಾ. ಸಿದ್ದಲಿಂಗ ಸ್ವಾಮಿಗಳ ಆಶೀರ್ವಾದ ಪಡೆದರು.

ಆಶೀರ್ವಾದ ಮಾಡಿ ಮಾತನಾಡಿದ ಸ್ವಾಮಿಗಳು ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಮಹಿಮ ಪಟೇಲ್ ಅವರಂತಹ ನಾಯಕರ ಅವಶ್ಯಕತೆ ತುಂಬಾ ಇದೆ, ಇವರ ಸರ್ವೋದಯ ಸಿದ್ಧಾಂತ ಜನರಿಗೆ ಬಹುಬೇಗ ಮನಮುಟ್ಟಲಿ ಹಾಗೂ ಡಾ ನಾಗರಾಜ್ ರವರಿಗೆ ಜಯಸಿಗಲಿ ಎಂದು ಆಶೀರ್ವಾದ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್ ಗಂಗೂರ್, ಸುರೇಶ್ ತುಮಕೂರು, ರಂಗನಾಥ್ ಕೆ ಆರ್, ರಾಜ್ಯ ರೈತ ಘಟಕದ ಅಧ್ಯಕ್ಷ ಶ್ರೀನಿವಾಸಗೌಡ, ರಾಜ್ಯ ಮಹಿಳಾ ಸಂಚಾಲಕಿ ಕಲಾವತಿ, ಯಶೋದಾ ತುಮಕೂರು ಪ್ರಕಾಶ್ ಮಹಡಿಕ್, ಉಪಾಧ್ಯಕ್ಷೆ ಶಾಂತಕುಮಾರಿ, ಯುವ ಜನತಾದಳ ಉಪಾಧ್ಯಕ್ಷ ಪ್ರಭು, ಮೈನಾವತಿ, ದೀಪಕ್, ಕೋಲಾರದ ನಾರಾಯಣಸ್ವಾಮಿಗೌಡ , ಅಂಬರೀಷ್, ಚಿತ್ರದುರ್ಗದ ಸುನಿಲ್, ತುಮಕೂರಿನ ವಿಶ್ವನಾಥ್ ಗೌಡ ಡಾ.ಲೋಹಿತ್ ಗೌಡ, ದಾವಣಗೆರೆ ಜಿಲ್ಲಾಧ್ಯಕ್ಷ ನೀಲಗಿರಿಯಪ್ಪ, ಮಲ್ಲಿಕ್ ಮುಂತಾದವರು ಇದ್ದರು.

Ramesh Babu

Journalist

Recent Posts

ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಸುಮಾರು 2 ಗಂಟೆಯಲ್ಲಿ ದೊಡ್ಡಬಳ್ಳಾಪುರ ಹೊರಹೊಲಯದಲ್ಲಿರುವ ಹೊಸಹುಡ್ಯ ಗ್ರಾಮದಲ್ಲಿ…

1 hour ago

ಜ್ಯೂಯಲರಿ ಶಾಪ್ ಮಾಲೀಕರಿಗೆ ಶಾಪ್ ಗಳ ಭದ್ರತೆಗೆ ಬಗ್ಗೆ ಅರಿವು ಮೂಡಿಸಿದ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಗ್ರಾಮಾಂತರ ಠಾಣಯಲ್ಲಿ ಜ್ಯೂಯಲರಿ ಶಾಪ್ ಮಾಲೀಕರುಗಳಿಗೆ, ಜ್ಯೂಯಲರಿ…

3 hours ago

ಹೊಸ ವರ್ಷಾಚರಣೆಗೆ ಕ್ಷಣಗಣನೆ- ನ್ಯೂ ಇಯರ್ ಸೆಲೆಬ್ರೇಷನ್ ಗೆ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ನಿರ್ಬಂಧ

ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ,…

6 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್‌ ಟನ್ ಮೆಕ್ಕೆಜೋಳ ಖರೀದಿ- ಇನ್ನೂ 76,430 ಮೆಟ್ರಿಕ್‌ ಟನ್‌ ಖರೀದಿಸಲು ಬಾಕಿಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…

20 hours ago

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

21 hours ago