ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಪಕ್ಷದ ಅಭ್ಯರ್ಥಿ ತಾಲೂಕಿನ ಕಲ್ಲಂಡೂರು ಗ್ರಾಮದ ಡಾ.ಕೆ ನಾಗರಾಜ್ ಅವರು ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮ ಪಟೇಲ್ ರವರ ನೇತೃತ್ವದಲ್ಲಿ ತುಮಕೂರು ಸಿದ್ದಗಂಗಾ ಮಠದ ಪೀಠಾಧಿಪತಿ ಶ್ರೀ ಡಾ. ಸಿದ್ದಲಿಂಗ ಸ್ವಾಮಿಗಳ ಆಶೀರ್ವಾದ ಪಡೆದರು.
ಆಶೀರ್ವಾದ ಮಾಡಿ ಮಾತನಾಡಿದ ಸ್ವಾಮಿಗಳು ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಮಹಿಮ ಪಟೇಲ್ ಅವರಂತಹ ನಾಯಕರ ಅವಶ್ಯಕತೆ ತುಂಬಾ ಇದೆ, ಇವರ ಸರ್ವೋದಯ ಸಿದ್ಧಾಂತ ಜನರಿಗೆ ಬಹುಬೇಗ ಮನಮುಟ್ಟಲಿ ಹಾಗೂ ಡಾ ನಾಗರಾಜ್ ರವರಿಗೆ ಜಯಸಿಗಲಿ ಎಂದು ಆಶೀರ್ವಾದ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್ ಗಂಗೂರ್, ಸುರೇಶ್ ತುಮಕೂರು, ರಂಗನಾಥ್ ಕೆ ಆರ್, ರಾಜ್ಯ ರೈತ ಘಟಕದ ಅಧ್ಯಕ್ಷ ಶ್ರೀನಿವಾಸಗೌಡ, ರಾಜ್ಯ ಮಹಿಳಾ ಸಂಚಾಲಕಿ ಕಲಾವತಿ, ಯಶೋದಾ ತುಮಕೂರು ಪ್ರಕಾಶ್ ಮಹಡಿಕ್, ಉಪಾಧ್ಯಕ್ಷೆ ಶಾಂತಕುಮಾರಿ, ಯುವ ಜನತಾದಳ ಉಪಾಧ್ಯಕ್ಷ ಪ್ರಭು, ಮೈನಾವತಿ, ದೀಪಕ್, ಕೋಲಾರದ ನಾರಾಯಣಸ್ವಾಮಿಗೌಡ , ಅಂಬರೀಷ್, ಚಿತ್ರದುರ್ಗದ ಸುನಿಲ್, ತುಮಕೂರಿನ ವಿಶ್ವನಾಥ್ ಗೌಡ ಡಾ.ಲೋಹಿತ್ ಗೌಡ, ದಾವಣಗೆರೆ ಜಿಲ್ಲಾಧ್ಯಕ್ಷ ನೀಲಗಿರಿಯಪ್ಪ, ಮಲ್ಲಿಕ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…