ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಯು ಪಕ್ಷದ ಅಭ್ಯರ್ಥಿ ತಾಲೂಕಿನ ಕಲ್ಲಂಡೂರು ಗ್ರಾಮದ ಡಾ.ಕೆ ನಾಗರಾಜ್ ಅವರು ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮ ಪಟೇಲ್ ರವರ ನೇತೃತ್ವದಲ್ಲಿ ತುಮಕೂರು ಸಿದ್ದಗಂಗಾ ಮಠದ ಪೀಠಾಧಿಪತಿ ಶ್ರೀ ಡಾ. ಸಿದ್ದಲಿಂಗ ಸ್ವಾಮಿಗಳ ಆಶೀರ್ವಾದ ಪಡೆದರು.
ಆಶೀರ್ವಾದ ಮಾಡಿ ಮಾತನಾಡಿದ ಸ್ವಾಮಿಗಳು ಪ್ರಸ್ತುತ ಸಂದರ್ಭದಲ್ಲಿ ನಾಡಿಗೆ ಮಹಿಮ ಪಟೇಲ್ ಅವರಂತಹ ನಾಯಕರ ಅವಶ್ಯಕತೆ ತುಂಬಾ ಇದೆ, ಇವರ ಸರ್ವೋದಯ ಸಿದ್ಧಾಂತ ಜನರಿಗೆ ಬಹುಬೇಗ ಮನಮುಟ್ಟಲಿ ಹಾಗೂ ಡಾ ನಾಗರಾಜ್ ರವರಿಗೆ ಜಯಸಿಗಲಿ ಎಂದು ಆಶೀರ್ವಾದ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್ ಗಂಗೂರ್, ಸುರೇಶ್ ತುಮಕೂರು, ರಂಗನಾಥ್ ಕೆ ಆರ್, ರಾಜ್ಯ ರೈತ ಘಟಕದ ಅಧ್ಯಕ್ಷ ಶ್ರೀನಿವಾಸಗೌಡ, ರಾಜ್ಯ ಮಹಿಳಾ ಸಂಚಾಲಕಿ ಕಲಾವತಿ, ಯಶೋದಾ ತುಮಕೂರು ಪ್ರಕಾಶ್ ಮಹಡಿಕ್, ಉಪಾಧ್ಯಕ್ಷೆ ಶಾಂತಕುಮಾರಿ, ಯುವ ಜನತಾದಳ ಉಪಾಧ್ಯಕ್ಷ ಪ್ರಭು, ಮೈನಾವತಿ, ದೀಪಕ್, ಕೋಲಾರದ ನಾರಾಯಣಸ್ವಾಮಿಗೌಡ , ಅಂಬರೀಷ್, ಚಿತ್ರದುರ್ಗದ ಸುನಿಲ್, ತುಮಕೂರಿನ ವಿಶ್ವನಾಥ್ ಗೌಡ ಡಾ.ಲೋಹಿತ್ ಗೌಡ, ದಾವಣಗೆರೆ ಜಿಲ್ಲಾಧ್ಯಕ್ಷ ನೀಲಗಿರಿಯಪ್ಪ, ಮಲ್ಲಿಕ್ ಮುಂತಾದವರು ಇದ್ದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…