Categories: ಕೋಲಾರ

‘ಸಿದ್ದರಾಮಯ್ಯಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆಯಿಲ್ಲ’-ಕೊಮ್ಮನಹಳ್ಳಿ ಆನಂದ್ ವಾಗ್ದಾಳಿ

ಕೋಲಾರ: ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆಯಿಲ್ಲ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ಒತ್ತಾಯಿಸಿದರು.

ತಾಲೂಕಿನ ಕೆಂದಟ್ಟಿ ಗ್ರಾಮದಲ್ಲಿ ಬುಧವಾರ ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲೂಕು ಕಾರ್ಯಕಾರಣಿ ಸಭೆಯಲ್ಲಿ ಗೋಪೂಜೆ ಸಲ್ಲಿಸಿ ಮಾತನಾಡಿದ ಅವರು. ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ. ಆದರೂ, ಸಿದ್ದರಾಮಯ್ಯ ನಲವತ್ತು ವರ್ಷಗಳಿಂದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ಕಾಂಗ್ರೆಸ್ ಶಾಸಕರು ಅವರ ಬೆಂಬಲಿಗರು ಸ್ವಯಂ ಸರ್ಟಿಫಿಕೇಟ್ ಕೊಡಲು ಹೊರಟಿದ್ದಾರೆ. ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ ವಿಚಾರವನ್ನು ರಾಜಕೀಯ ದಾಳವಾಗಿ ಬಳಸಿಕೊಂಡು ಅಧಿಕಾರದಲ್ಲಿ ಮುಂದುವರಿಯಲು ಪ್ರಯತ್ನಿಸುತ್ತಿರುವುದು ಸರಿಯಲ್ಲ. ಪ್ರಕರಣಗಳ ಆರೋಪವಿದ್ದರೂ ಅಧಿಕಾರದಲ್ಲಿ ಮುಂದುವರಿಯಲು ಯತ್ನಿಸುವುದು ಸಂವಿಧಾನಕ್ಕೆ ಮಾಡುವ ಅಗೌರವಾಗಿದೆ. ಕೂಡಲೇ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗುವಂತೆ ರೈತ ಬಜೆಟ್ ಮಂಡಿಸಿದ್ದರು ಆದರೆ ಕಾಂಗ್ರೆಸ್ ಸರ್ಕಾರವು ರೈತರ ಬಗ್ಗೆ ಗಮನಹರಿಸುತ್ತಿಲ್ಲ ರಾಜ್ಯದಲ್ಲಿ ಖಜಾನೆ ಸಂಪೂರ್ಣವಾಗಿ ಖಾಲಿ ಮಾಡಿ ದಿವಾಳಿ ಮಾಡಿದ್ದಾರೆ ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರೈತರ ಬೆಳೆಗೆ ಬೆಂಬಲ ಬೆಲೆ ಜಾಸ್ತಿ ಮಾಡಿ ಪರಿಹಾರವು ನೀಡಿದೆ ರಾಜ್ಯ ಸರ್ಕಾರ ಮಾತ್ರ ರೈತರಿಗೆ ದ್ರೋಹ ಮಾಡಿದೆ ಈ ಸರ್ಕಾರದ ವಿರುದ್ದ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ರಾಜ್ಯ ಬಿಜೆಪಿ ರೈತ ಮೋರ್ಚಾ ಮುಂದಾಗಬೇಕು ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ರಾಜ್ಯಪಾಲರನ್ನು ಬಾಂಗ್ಲಾ ದೇಶದ ಮಾದರಿಯಲ್ಲಿ ರಾಜ್ಯದಿಂದ ಓಡಿಸುತ್ತೇವೆ ಎಂಬ ಹೇಳಿಕೆ ನೀಡಿರುವ ಎಂಎಲ್ಸಿ ಐವನ್ ಡಿಸೋಜ ವಿರುದ್ಧ ಪ್ರಕರಣ ದಾಖಲಿಸಬೇಕು ಕೆಲವು ಕಡೆಯಲ್ಲಿ ಕಾಂಗ್ರೆಸ್ ನಾಯಕರು ನಾಲಿಗೆಯ ಮೇಲೆ ಹಿಡಿತ ಇಲ್ಲದೆ ಮಾತನಾಡಿದ್ದಾರೆ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು

ತಾಲೂಕು ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಕೆ. ಚಂದ್ರಶೇಖರಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ್, ಮಂಜುನಾಥ್, ಉಪಾಧ್ಯಕ್ಷರಾಗಿ ಮುರಳಿ, ಶ್ರೀಧರ್ ಬಾಬು,ವೆಂಕಟೇಶ್, ಶ್ರೀನಿವಾಸಚಾರಿ, ಗೋಪಾಲಪ್ಪ ಕಾರ್ಯದರ್ಶಿಗಳಾಗಿ ಜಗದೀಶ್, ಶಶಿಕುಮಾರ್, ಶ್ರೀನಾಥ್, ಬೈರೇಗೌಡ ಮಂಜುನಾಥ್ ಬೈರೇಷ್ ಸೇರಿದಂತೆ ಸಮಿತಿ ಸದಸ್ಯರನ್ನು ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು.

ವೇದಿಕೆಯಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರಾದ ಲಕ್ಷ್ಮಣಗೌಡ, ನಾರಾಯಣಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿಜೆಪಿ ಶಿವಣ್ಣ, ಹುಣಸೀಕೋಟೆ ಶ್ರೀನಿವಾಸ್, ಜಿಲ್ಲಾ ಉಪಾಧ್ಯಕ್ಷರಾದ ಡಾ.ಆರ್ ನಾರಾಯಣಸ್ವಾಮಿ, ಸತೀಶ್ ಗೌಡ, ಗೋಪಸಂದ್ರ ನಾರಾಯಣಸ್ವಾಮಿ, ಜಿಲ್ಲಾ ಖಜಾಂಚಿ ವೆಂಕಟೇಶ್, ಮುಖಂಡರಾದ ಓಹಿಲೇಶ್, ಮುನಿಸ್ವಾಮಿ ಮುಂತಾದವರು ಇದ್ದರು.

Ramesh Babu

Journalist

Share
Published by
Ramesh Babu

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

4 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago