ಕೋಲಾರ: ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆಯಿಲ್ಲ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ಒತ್ತಾಯಿಸಿದರು.
ತಾಲೂಕಿನ ಕೆಂದಟ್ಟಿ ಗ್ರಾಮದಲ್ಲಿ ಬುಧವಾರ ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲೂಕು ಕಾರ್ಯಕಾರಣಿ ಸಭೆಯಲ್ಲಿ ಗೋಪೂಜೆ ಸಲ್ಲಿಸಿ ಮಾತನಾಡಿದ ಅವರು. ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ. ಆದರೂ, ಸಿದ್ದರಾಮಯ್ಯ ನಲವತ್ತು ವರ್ಷಗಳಿಂದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ಕಾಂಗ್ರೆಸ್ ಶಾಸಕರು ಅವರ ಬೆಂಬಲಿಗರು ಸ್ವಯಂ ಸರ್ಟಿಫಿಕೇಟ್ ಕೊಡಲು ಹೊರಟಿದ್ದಾರೆ. ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ ವಿಚಾರವನ್ನು ರಾಜಕೀಯ ದಾಳವಾಗಿ ಬಳಸಿಕೊಂಡು ಅಧಿಕಾರದಲ್ಲಿ ಮುಂದುವರಿಯಲು ಪ್ರಯತ್ನಿಸುತ್ತಿರುವುದು ಸರಿಯಲ್ಲ. ಪ್ರಕರಣಗಳ ಆರೋಪವಿದ್ದರೂ ಅಧಿಕಾರದಲ್ಲಿ ಮುಂದುವರಿಯಲು ಯತ್ನಿಸುವುದು ಸಂವಿಧಾನಕ್ಕೆ ಮಾಡುವ ಅಗೌರವಾಗಿದೆ. ಕೂಡಲೇ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗುವಂತೆ ರೈತ ಬಜೆಟ್ ಮಂಡಿಸಿದ್ದರು ಆದರೆ ಕಾಂಗ್ರೆಸ್ ಸರ್ಕಾರವು ರೈತರ ಬಗ್ಗೆ ಗಮನಹರಿಸುತ್ತಿಲ್ಲ ರಾಜ್ಯದಲ್ಲಿ ಖಜಾನೆ ಸಂಪೂರ್ಣವಾಗಿ ಖಾಲಿ ಮಾಡಿ ದಿವಾಳಿ ಮಾಡಿದ್ದಾರೆ ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರೈತರ ಬೆಳೆಗೆ ಬೆಂಬಲ ಬೆಲೆ ಜಾಸ್ತಿ ಮಾಡಿ ಪರಿಹಾರವು ನೀಡಿದೆ ರಾಜ್ಯ ಸರ್ಕಾರ ಮಾತ್ರ ರೈತರಿಗೆ ದ್ರೋಹ ಮಾಡಿದೆ ಈ ಸರ್ಕಾರದ ವಿರುದ್ದ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ರಾಜ್ಯ ಬಿಜೆಪಿ ರೈತ ಮೋರ್ಚಾ ಮುಂದಾಗಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ರಾಜ್ಯಪಾಲರನ್ನು ಬಾಂಗ್ಲಾ ದೇಶದ ಮಾದರಿಯಲ್ಲಿ ರಾಜ್ಯದಿಂದ ಓಡಿಸುತ್ತೇವೆ ಎಂಬ ಹೇಳಿಕೆ ನೀಡಿರುವ ಎಂಎಲ್ಸಿ ಐವನ್ ಡಿಸೋಜ ವಿರುದ್ಧ ಪ್ರಕರಣ ದಾಖಲಿಸಬೇಕು ಕೆಲವು ಕಡೆಯಲ್ಲಿ ಕಾಂಗ್ರೆಸ್ ನಾಯಕರು ನಾಲಿಗೆಯ ಮೇಲೆ ಹಿಡಿತ ಇಲ್ಲದೆ ಮಾತನಾಡಿದ್ದಾರೆ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು
ತಾಲೂಕು ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳ ಆಯ್ಕೆ
ಅಧ್ಯಕ್ಷರಾಗಿ ಕೆ. ಚಂದ್ರಶೇಖರಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ್, ಮಂಜುನಾಥ್, ಉಪಾಧ್ಯಕ್ಷರಾಗಿ ಮುರಳಿ, ಶ್ರೀಧರ್ ಬಾಬು,ವೆಂಕಟೇಶ್, ಶ್ರೀನಿವಾಸಚಾರಿ, ಗೋಪಾಲಪ್ಪ ಕಾರ್ಯದರ್ಶಿಗಳಾಗಿ ಜಗದೀಶ್, ಶಶಿಕುಮಾರ್, ಶ್ರೀನಾಥ್, ಬೈರೇಗೌಡ ಮಂಜುನಾಥ್ ಬೈರೇಷ್ ಸೇರಿದಂತೆ ಸಮಿತಿ ಸದಸ್ಯರನ್ನು ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು.
ವೇದಿಕೆಯಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರಾದ ಲಕ್ಷ್ಮಣಗೌಡ, ನಾರಾಯಣಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿಜೆಪಿ ಶಿವಣ್ಣ, ಹುಣಸೀಕೋಟೆ ಶ್ರೀನಿವಾಸ್, ಜಿಲ್ಲಾ ಉಪಾಧ್ಯಕ್ಷರಾದ ಡಾ.ಆರ್ ನಾರಾಯಣಸ್ವಾಮಿ, ಸತೀಶ್ ಗೌಡ, ಗೋಪಸಂದ್ರ ನಾರಾಯಣಸ್ವಾಮಿ, ಜಿಲ್ಲಾ ಖಜಾಂಚಿ ವೆಂಕಟೇಶ್, ಮುಖಂಡರಾದ ಓಹಿಲೇಶ್, ಮುನಿಸ್ವಾಮಿ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…